ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ತಿಪ್ಪನಹಾಳದಲ್ಲಿ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ದೊರೆಯುತ್ತಿದೆ. ವಾರದ 7 ದಿನವೂ ನೀರು ಪೂರೈಕೆ ಆಗುತ್ತಿರುವ ತಾಲೂಕಿನ ಮೊದಲ ಗ್ರಾಮ ಎನ್ನುವ ಹಿರಿಮೆಗೆ ಪಾತ್ರವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೆರೆ ತುಂಬಿಸುವ ಮತ್ತು ಕುಷ್ಟಗಿ, ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಮೂಲಕ ಅನುಷ್ಠಾನ ಮಾಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ದೂರ ಸಾಗಬೇಕಾಗಿದ್ದ ಜನರಿಗೆ ಮನೆ ಮುಂದೆಯೇ ನಲ್ಲಿಯ ಮೂಲಕ ನೀರು ಲಭ್ಯವಾಗುತ್ತಿದೆ. ಜಲಜೀವನ್ ಮಿಷನ್ ಯೋಜನೆ ಜಾರಿಯಿಂದಾಗಿ ಕೊಪ್ಪಳ ಜಿಲ್ಲೆಯ ತಿಪ್ಪನಹಾಳ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರಕುತ್ತಿರುವುದು ಗ್ರಾಮದ ಜನರ ಹರ್ಷಕ್ಕೆ ಕಾರಣವಾಗಿದೆ.
ಈ ಮುಂಚೆ ನೀರಿಗಾಗಿ ಬಹಳ ದೂರ ಹೋಗಬೇಕಾಗಿತ್ತು. ಇದೀಗ ನಲ್ಲಿಯ ಮೂಲಕ ಮನೆಯ ಮುಂದೆಯೇ ನೀರು ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಅನುಕೂಲವಾಗಿದೆ ಎಂದು ಗ್ರಾಮಸ್ಥರಾದ ಶಾಂತಾ ಹೇಳುತ್ತಾರೆ. ಮನೆಯಿಂದ ಶಾಲೆಗೆ ಬಾಟಲಿಯಲ್ಲಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಜಲಜೀವನ್ ಮಿಷನ್ ಅನುಷ್ಠಾನದಿಂದಾಗಿ ಶುದ್ಧ ಕುಡಿಯುವ ನೀರು ಸಿಗುತ್ತಿದೆ. ಇಲ್ಲಿನ ಬಹುದಿನಗಳ ಸಮಸ್ಯೆ ಬಗೆಹರಿದಿದೆ ಎಂದು ಶಿಕ್ಷಕಿ ನಾಗರತ್ನ ಹೇಳುತ್ತಾರೆ. ದಿನದ 24 ಗಂಟೆ ಹಾಗೂ ವಾರದ 7 ದಿನಗಳು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಸವರಾಜ ಬಂಗಾರಿ ಹೇಳುತ್ತಾರೆ.
ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು…
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ…
ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ…
ಸಾಕಷ್ಟು ಜನ ಅಡಿಕೆ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ…
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32…