MIRROR FOCUS

ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಲಜೀವನ್  ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.

Advertisement
Advertisement

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ತಿಪ್ಪನಹಾಳದಲ್ಲಿ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ದೊರೆಯುತ್ತಿದೆ. ವಾರದ 7 ದಿನವೂ ನೀರು ಪೂರೈಕೆ ಆಗುತ್ತಿರುವ ತಾಲೂಕಿನ ಮೊದಲ ಗ್ರಾಮ ಎನ್ನುವ ಹಿರಿಮೆಗೆ ಪಾತ್ರವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೆರೆ ತುಂಬಿಸುವ ಮತ್ತು  ಕುಷ್ಟಗಿ,  ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಮೂಲಕ ಅನುಷ್ಠಾನ ಮಾಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ  ದೂರ ಸಾಗಬೇಕಾಗಿದ್ದ ಜನರಿಗೆ ಮನೆ ಮುಂದೆಯೇ ನಲ್ಲಿಯ ಮೂಲಕ ನೀರು ಲಭ್ಯವಾಗುತ್ತಿದೆ. ‌ಜಲಜೀವನ್ ಮಿಷನ್ ಯೋಜನೆ ಜಾರಿಯಿಂದಾಗಿ ಕೊಪ್ಪಳ ಜಿಲ್ಲೆಯ ತಿಪ್ಪನಹಾಳ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರಕುತ್ತಿರುವುದು ಗ್ರಾಮದ ಜನರ ಹರ್ಷಕ್ಕೆ ಕಾರಣವಾಗಿದೆ.

ಈ ಮುಂಚೆ ನೀರಿಗಾಗಿ ಬಹಳ ದೂರ ಹೋಗಬೇಕಾಗಿತ್ತು. ಇದೀಗ ನಲ್ಲಿಯ ಮೂಲಕ ಮನೆಯ ಮುಂದೆಯೇ ನೀರು ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಅನುಕೂಲವಾಗಿದೆ ಎಂದು ಗ್ರಾಮಸ್ಥರಾದ ಶಾಂತಾ ಹೇಳುತ್ತಾರೆ. ಮನೆಯಿಂದ ಶಾಲೆಗೆ ಬಾಟಲಿಯಲ್ಲಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಜಲಜೀವನ್ ಮಿಷನ್ ಅನುಷ್ಠಾನದಿಂದಾಗಿ ಶುದ್ಧ ಕುಡಿಯುವ ನೀರು ಸಿಗುತ್ತಿದೆ. ಇಲ್ಲಿನ ಬಹುದಿನಗಳ ಸಮಸ್ಯೆ ಬಗೆಹರಿದಿದೆ ಎಂದು  ಶಿಕ್ಷಕಿ ನಾಗರತ್ನ ಹೇಳುತ್ತಾರೆ. ದಿನದ 24 ಗಂಟೆ ಹಾಗೂ ವಾರದ 7 ದಿನಗಳು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಸವರಾಜ ಬಂಗಾರಿ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ

ಜೂನ್ 5 ವಿಶ್ವ ಪರಿಸರ ದಿನ. ಈ ಬಾರಿ ವಿಶ್ವಪರಿಸರ ದಿನದ ಪ್ರಯುಕ್ತ…

32 minutes ago

ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

53 minutes ago

ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…

10 hours ago

ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

10 hours ago

ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…

10 hours ago

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

24 hours ago