ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ತಿಪ್ಪನಹಾಳದಲ್ಲಿ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ದೊರೆಯುತ್ತಿದೆ. ವಾರದ 7 ದಿನವೂ ನೀರು ಪೂರೈಕೆ ಆಗುತ್ತಿರುವ ತಾಲೂಕಿನ ಮೊದಲ ಗ್ರಾಮ ಎನ್ನುವ ಹಿರಿಮೆಗೆ ಪಾತ್ರವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೆರೆ ತುಂಬಿಸುವ ಮತ್ತು ಕುಷ್ಟಗಿ, ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಮೂಲಕ ಅನುಷ್ಠಾನ ಮಾಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ದೂರ ಸಾಗಬೇಕಾಗಿದ್ದ ಜನರಿಗೆ ಮನೆ ಮುಂದೆಯೇ ನಲ್ಲಿಯ ಮೂಲಕ ನೀರು ಲಭ್ಯವಾಗುತ್ತಿದೆ. ಜಲಜೀವನ್ ಮಿಷನ್ ಯೋಜನೆ ಜಾರಿಯಿಂದಾಗಿ ಕೊಪ್ಪಳ ಜಿಲ್ಲೆಯ ತಿಪ್ಪನಹಾಳ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರಕುತ್ತಿರುವುದು ಗ್ರಾಮದ ಜನರ ಹರ್ಷಕ್ಕೆ ಕಾರಣವಾಗಿದೆ.
ಈ ಮುಂಚೆ ನೀರಿಗಾಗಿ ಬಹಳ ದೂರ ಹೋಗಬೇಕಾಗಿತ್ತು. ಇದೀಗ ನಲ್ಲಿಯ ಮೂಲಕ ಮನೆಯ ಮುಂದೆಯೇ ನೀರು ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಅನುಕೂಲವಾಗಿದೆ ಎಂದು ಗ್ರಾಮಸ್ಥರಾದ ಶಾಂತಾ ಹೇಳುತ್ತಾರೆ. ಮನೆಯಿಂದ ಶಾಲೆಗೆ ಬಾಟಲಿಯಲ್ಲಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಜಲಜೀವನ್ ಮಿಷನ್ ಅನುಷ್ಠಾನದಿಂದಾಗಿ ಶುದ್ಧ ಕುಡಿಯುವ ನೀರು ಸಿಗುತ್ತಿದೆ. ಇಲ್ಲಿನ ಬಹುದಿನಗಳ ಸಮಸ್ಯೆ ಬಗೆಹರಿದಿದೆ ಎಂದು ಶಿಕ್ಷಕಿ ನಾಗರತ್ನ ಹೇಳುತ್ತಾರೆ. ದಿನದ 24 ಗಂಟೆ ಹಾಗೂ ವಾರದ 7 ದಿನಗಳು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಸವರಾಜ ಬಂಗಾರಿ ಹೇಳುತ್ತಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…