ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ತಿಪ್ಪನಹಾಳದಲ್ಲಿ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ದೊರೆಯುತ್ತಿದೆ. ವಾರದ 7 ದಿನವೂ ನೀರು ಪೂರೈಕೆ ಆಗುತ್ತಿರುವ ತಾಲೂಕಿನ ಮೊದಲ ಗ್ರಾಮ ಎನ್ನುವ ಹಿರಿಮೆಗೆ ಪಾತ್ರವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೆರೆ ತುಂಬಿಸುವ ಮತ್ತು ಕುಷ್ಟಗಿ, ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಮೂಲಕ ಅನುಷ್ಠಾನ ಮಾಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ದೂರ ಸಾಗಬೇಕಾಗಿದ್ದ ಜನರಿಗೆ ಮನೆ ಮುಂದೆಯೇ ನಲ್ಲಿಯ ಮೂಲಕ ನೀರು ಲಭ್ಯವಾಗುತ್ತಿದೆ. ಜಲಜೀವನ್ ಮಿಷನ್ ಯೋಜನೆ ಜಾರಿಯಿಂದಾಗಿ ಕೊಪ್ಪಳ ಜಿಲ್ಲೆಯ ತಿಪ್ಪನಹಾಳ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರಕುತ್ತಿರುವುದು ಗ್ರಾಮದ ಜನರ ಹರ್ಷಕ್ಕೆ ಕಾರಣವಾಗಿದೆ.
ಈ ಮುಂಚೆ ನೀರಿಗಾಗಿ ಬಹಳ ದೂರ ಹೋಗಬೇಕಾಗಿತ್ತು. ಇದೀಗ ನಲ್ಲಿಯ ಮೂಲಕ ಮನೆಯ ಮುಂದೆಯೇ ನೀರು ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಅನುಕೂಲವಾಗಿದೆ ಎಂದು ಗ್ರಾಮಸ್ಥರಾದ ಶಾಂತಾ ಹೇಳುತ್ತಾರೆ. ಮನೆಯಿಂದ ಶಾಲೆಗೆ ಬಾಟಲಿಯಲ್ಲಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಜಲಜೀವನ್ ಮಿಷನ್ ಅನುಷ್ಠಾನದಿಂದಾಗಿ ಶುದ್ಧ ಕುಡಿಯುವ ನೀರು ಸಿಗುತ್ತಿದೆ. ಇಲ್ಲಿನ ಬಹುದಿನಗಳ ಸಮಸ್ಯೆ ಬಗೆಹರಿದಿದೆ ಎಂದು ಶಿಕ್ಷಕಿ ನಾಗರತ್ನ ಹೇಳುತ್ತಾರೆ. ದಿನದ 24 ಗಂಟೆ ಹಾಗೂ ವಾರದ 7 ದಿನಗಳು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಸವರಾಜ ಬಂಗಾರಿ ಹೇಳುತ್ತಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…