Advertisement
MIRROR FOCUS

ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ

Share

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಲಜೀವನ್  ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ತಿಪ್ಪನಹಾಳದಲ್ಲಿ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ದೊರೆಯುತ್ತಿದೆ. ವಾರದ 7 ದಿನವೂ ನೀರು ಪೂರೈಕೆ ಆಗುತ್ತಿರುವ ತಾಲೂಕಿನ ಮೊದಲ ಗ್ರಾಮ ಎನ್ನುವ ಹಿರಿಮೆಗೆ ಪಾತ್ರವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೆರೆ ತುಂಬಿಸುವ ಮತ್ತು  ಕುಷ್ಟಗಿ,  ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಮೂಲಕ ಅನುಷ್ಠಾನ ಮಾಡಲಾಗುತ್ತಿದ್ದು, ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ  ದೂರ ಸಾಗಬೇಕಾಗಿದ್ದ ಜನರಿಗೆ ಮನೆ ಮುಂದೆಯೇ ನಲ್ಲಿಯ ಮೂಲಕ ನೀರು ಲಭ್ಯವಾಗುತ್ತಿದೆ. ‌ಜಲಜೀವನ್ ಮಿಷನ್ ಯೋಜನೆ ಜಾರಿಯಿಂದಾಗಿ ಕೊಪ್ಪಳ ಜಿಲ್ಲೆಯ ತಿಪ್ಪನಹಾಳ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರಕುತ್ತಿರುವುದು ಗ್ರಾಮದ ಜನರ ಹರ್ಷಕ್ಕೆ ಕಾರಣವಾಗಿದೆ.

ಈ ಮುಂಚೆ ನೀರಿಗಾಗಿ ಬಹಳ ದೂರ ಹೋಗಬೇಕಾಗಿತ್ತು. ಇದೀಗ ನಲ್ಲಿಯ ಮೂಲಕ ಮನೆಯ ಮುಂದೆಯೇ ನೀರು ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಅನುಕೂಲವಾಗಿದೆ ಎಂದು ಗ್ರಾಮಸ್ಥರಾದ ಶಾಂತಾ ಹೇಳುತ್ತಾರೆ. ಮನೆಯಿಂದ ಶಾಲೆಗೆ ಬಾಟಲಿಯಲ್ಲಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಜಲಜೀವನ್ ಮಿಷನ್ ಅನುಷ್ಠಾನದಿಂದಾಗಿ ಶುದ್ಧ ಕುಡಿಯುವ ನೀರು ಸಿಗುತ್ತಿದೆ. ಇಲ್ಲಿನ ಬಹುದಿನಗಳ ಸಮಸ್ಯೆ ಬಗೆಹರಿದಿದೆ ಎಂದು  ಶಿಕ್ಷಕಿ ನಾಗರತ್ನ ಹೇಳುತ್ತಾರೆ. ದಿನದ 24 ಗಂಟೆ ಹಾಗೂ ವಾರದ 7 ದಿನಗಳು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಸವರಾಜ ಬಂಗಾರಿ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

8 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

9 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

10 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

10 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

10 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

13 hours ago