ಕರ್ನಾಟಕದಲ್ಲಿ ಬೆಳೆಯುವ ನೇರಳೆಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೇ ಮೊದಲ ಬಾರಿಗೆ ನೆರಳೆ ಹಣ್ಣನ್ನು ಕರ್ನಾಟಕದಿಂದ ಲಂಡನ್ಗೆ ರಫ್ತು ಮಾಡಲಾಗುತ್ತಿದೆ. ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಬೇಸಿಗೆ ಕಾಲದಲ್ಲಿ ಫಲ ಬಿಡುವ ನೇರಳೆ ಹಣ್ಣು ತಿನ್ನಲು ಬಲು ರುಚಿ ಜೊತೆಗೆ ಇದರಲ್ಲಿ ಹಲವಾರು ಔಷಧೀಯ ಗುಣಗಳು ಕೂಡ ಇವೆ.ಇದನ್ನು ಜಾಮೂನ್ ಎಂದೂ ಕರೆಯುತ್ತಾರೆ. ಈ ಹಣ್ಣು ಅದರ ಗಾಢ ಬಣ್ಣ ಮತ್ತು ಹುಳಿ ಸಿಹಿ ರುಚಿಯಿಂದಾಗಿ ಜನರು ಇಷ್ಟಪಡುತ್ತಾರೆ. ಹಳ್ಳಿ ಭಾಗಗಳಲ್ಲಿ ಗುಡ್ಡಗಳಲ್ಲಿ ನೇರಳೆ ಹಣ್ಣಿನ ಮರಗಳಿರುವುದು ಸಾಮಾನ್ಯ. ಇದೀಗ ಈ ಹಣ್ಣಿಗೆ ಜಾಗತಿಕ ಮಾರುಕಟ್ಟೆ ಲಭ್ಯವಾಗಿದೆ. ಕೇಂದ್ರ ವಾಣಿಜ್ಯ ಸಚಿವಾಲಯದ ಅಂಗಸಂಸ್ಥೆಯಾಗಿರುವ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕದಿಂದ ಲಂಡನ್ ಗೆ ತಾಜಾ ನೇರಳೆ ಹಣ್ಣುಗಳ ರಫ್ತಿಗೆ ಚಾಲನೆ ನೀಡಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…