ಪುತ್ತೂರು ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವ ವರ್ಷಾಚರಣೆ ಪ್ರಯುಕ್ತ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಬಳಗದಿಂದ ವಲಯ ಮಟ್ಟದ ಸಭೆ ಪುತ್ತೂರಿನಲ್ಲಿ ಸೆ.24 ನಡೆಯಲಿದೆ.ಕರಾವಳಿ ವಲಯ ಮಟ್ಟದ ಸಭೆಯಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10:00 ಗಂಟೆಗೆ ಸಭೆ ಉದ್ಘಾಟನೆಯಾಗಲಿದೆ. ಸಭೆ ಮುಗಿದ ಬಳಿಕ ಮಧ್ಯಾಹ್ನ 1 ಗಂಟೆಗೆ ಭೋಜನಕೂಟ ಏರ್ಪಡಿಸಲಾಗಿದೆ.
ಜನಸೇವಾ ಟ್ರಸ್ಟ್ನ ಗೌರವಾನ್ವಿತ ಕಾರ್ಯದರ್ಶಿಗಳಾದ ನಿರ್ಮಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೇದ ವಿಜ್ಞಾನ ಗುರುಕುಲಂನ ಮುಖ್ಯಸ್ಥರಾದ ಪ್ರೊ. ರಾಮಚಂದ್ರ ಜಿ. ಭಟ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ವಿವರಗಳಿಗಾಗಿ ಕಾರ್ಯಕರ್ತರಾದ ಡಿ.ಕೆ. ಅಜಿತ್ ಕುಮಾರ್ (90083 95200), ಯೋಗೀಶ್ (7483303805 )ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…