ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ನೀಡುವುದಕ್ಕೆ ಆದ್ಯತೆ ನೀಡುವ ಮೂಲಕ ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರವು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಏಪ್ರಿಲ್ 7ನ್ನು ವಿಶ್ವ ಆರೋಗ್ಯ ದಿನ ಎಂದು ಘೋಷಿಸಿದ್ದು ಈ ಸಂದರ್ಭದಲ್ಲಿ ಆರೋಗ್ಯ ಆಶಯವನ್ನಿಟ್ಟುಕೊಂಡು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಮೋದಿ,ವಿಶ್ವ ಆರೋಗ್ಯ ದಿನದ ಶುಭಾಶಯಗಳು. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಮತ್ತು ಕ್ಷೇಮದಿಂದ ಇರಲಿ. ಇಂದು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಅವರ ಕಠಿಣ ಪರಿಶ್ರಮವೇ ನಮ್ಮ ಗ್ರಹವನ್ನು ರಕ್ಷಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಮಂತ್ರಿ ಜನ್ ಔಷಧಿಯಂತಹ ಯೋಜನೆಗಳ ಫಲಾನುಭವಿಗಳೊಂದಿಗೆ ನಾನು ಸಂವಾದ ನಡೆಸಿದಾಗ ನನಗೆ ಸಂತೋಷವಾಗುತ್ತದೆ. ಕೈಗೆಟಕುವ ದರದ ಆರೋಗ್ಯ ರಕ್ಷಣೆಯತ್ತ ನಮ್ಮ ಗಮನವು ಬಡ ಮತ್ತು ಮಧ್ಯಮ ವರ್ಗದವರಿಗೆ ಗಮನಾರ್ಹ ಪ್ರಯೋಜನವನ್ನು ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…