ಶ್ರೀ ರಕ್ಷಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಯೋಗದೊಂದಿಗೆ ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.
ಸುಶ್ಮಿತಾ ಗಣೇಶ್ ಉಜಿರೆ ಇವರು ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.ಈ ತರಬೇತಿಯ ಪ್ರಯೋಜನವನ್ನು ಗ್ರಾಮದ ಐವತ್ತುಕ್ಕೂ ಹೆಚ್ಚು ಜನರು ಪಡಕೊಂಡರು.ವೇದಿಕೆಯಲ್ಲಿ ಶ್ರೀರಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಮಮತಾ, ಚೈತ್ರ ಯುವತಿ ಮಂಡಲ ಅಜ್ಜಾವರ ಅಧ್ಯಕ್ಷೆ ಶಶ್ಮಿ ಭಟ್, ಪ್ರತಾಪ ಯುವಕ ಮಂಡಲದ ಅಧ್ಯಕ್ಷರಾದ ಗುರುರಾಜ್, NRLM ವಲಯ ಮೇಲ್ವಿಚಾರಕರು ಕೌಶಲ್ಯ, ರೂಪ, ಅಜ್ಜಾವರ ಶಾಲೆಯ ಪ್ರಭಾರ ಶಿಕ್ಷಕಿಯಾದ ಶ್ರೀಮತಿ ವಿದ್ಯಾಶಂಕರಿ, ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ರೇವತಿ ದೊಡ್ಡೇರಿಯವರ ಪ್ರಾರ್ಥನೆಯೊಂದಿಗೆ ನೆರವೇರಿಸಲಾಯಿತು. ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಚೈತ್ರ ಯುವತಿ ಮಂಡಲ ಮತ್ತು ಪ್ರತಾಪ ಯುವಕ ಮಂಡಲ ಪದಾಧಿಕಾರಿಗಳು ಮತ್ತು ಸದಸ್ಯರು, ಪ್ರೌಢಶಾಲೆ ಅಜ್ಜಾವರ ಇಲ್ಲಿಯ ಇಕೋ ಕ್ಲಬ್ ವಿದ್ಯಾರ್ಥಿಗಳು, ಅಜ್ಜಾವರ ಕೃಷಿ ಸಖಿ ಪೂರ್ಣಿಮಾ, ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ), ಮಂಡೆಕೋಲು MBK ವನಿತಾ,ಪಶು ಸಖಿ ಪುಷ್ಪಲತಾ, LCRP ವಾಣಿ,ಪ್ರೌಢಶಾಲೆ ಅಜ್ಜಾವರ ಶಿಕ್ಷಕರಾದ ಚಂದ್ರಶೇಖರ್ ಭಟ್, ಹಾಜರಿದ್ದರು.
ರೇವತಿ ದೊಡ್ಡೇರಿಯವರ ಪ್ರಾರ್ಥನೆ ಹಾಡಿದರು.LCRP ಹರಿಣಾಕ್ಷಿ ಇವರು ಧನ್ಯವಾದ ಮಾಡಿದರು.ನಿರೂಪಣೆ ಮತ್ತು ಸ್ವಾಗತವನ್ನು MBK ಜಯಶ್ರೀ ಬೇಲ್ಯ ಯವರು ನೆರವೇರಿಸಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…