Advertisement
MIRROR FOCUS

ಇಂದು ಜಯದೇವ ಆಸ್ಪತ್ರೆ ಡಾ.ಮಂಜುನಾಥ್ ನಿವೃತ್ತಿ | ವೃತ್ತಿ ಜೀವನದಲ್ಲಿ ಸಾರ್ಥಕ ಸೇವೆ ಸಲ್ಲಿಸಿದ ಹೆಮ್ಮೆಯ ಡಾ. ಮಂಜುನಾಥ್‍ |

Share

ವೈದ್ಯೋ ನಾರಾಯಣ ಹರಿ ಅಂಂತಾರೆ. ಆ ಮಾತಿಗೆ ಸ್ಪಷ್ಟ ನಿದರ್ಶನ ಜಯದೇವ ಆಸ್ಪತ್ರೆ(Jayadeva Hospital) ನಿರ್ದೇಶಕರಾಗಿದ್ದ  ಡಾ. ಮಂಜುನಾಥ್‍ (Dr Manjunath). ತಮ್ಮ ವೈದ್ಯಕೀಯ ವೃತ್ತಿ ಜೀವನದಲ್ಲಿ ಸಾರ್ಥಕ ಸೇವೆ ಮಾಡಿ ಎಲ್ಲರ ಹೃದಯ ಗೆದ್ದವರು. ಮತ್ತೆ ಅವರನ್ನೇ ಜಯದೇವ ಆಸ್ಪತ್ರೆ ನಿರ್ದೇಶಕರನ್ನಾಗಿ ಮುಂದುವರಿಸುವ ನಿರ್ಧಾರವನ್ನು ಸರ್ಕಾರ(Govt) ಕೈ ಬಿಟ್ಟಿದೆ. ಜನವರಿ 31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ (Jayadeva Hospital Director) ಡಾ. ಮಂಜುನಾಥ್ ಅವಧಿ ಮುಕ್ತಾಯವಾಗಲಿದೆ.

ಕಳೆದ ಬಾರಿ ಅವಧಿ ಮುಕ್ತಾಯ ಬಳಿಕ ಜನರ ಒತ್ತಾಯ ಕೇಳಿ ಬಂದ ಹಿನ್ನೆಲೆ 6 ತಿಂಗಳ ಕಾಲ ಹುದ್ದೆಯಲ್ಲಿ ಸರ್ಕಾರ ಮುಂದುವರಿಸಿತ್ತು. ಎನ್‍ಎಂಸಿ ಆಕ್ಟ್ ಪ್ರಕಾರ 70 ವರ್ಷದವರೆಗೂ ಸೇವೆ ಸಲ್ಲಿಸಬಹುದಾಗಿದೆ. ಡಾ. ಮಂಜುನಾಥ್ ಅವರಿಗೆ 67 ವರ್ಷವಾಗಿದ್ದು, ಇನ್ನು 3 ವರ್ಷಗಳ ಕಾಲ ಸೇವೆ ಸಲ್ಲಿಸಬಹುದಾಗಿದೆ. ಆದರೆ ಸರ್ಕಾರ ಮುಂದುವರಿಸುವ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಜನವರಿ 31ಕ್ಕೆ ಡಾ. ಮಂಜುನಾಥ್ ನಿವೃತ್ತಿ ಘೋಷಣೆ ಮಾಡಲಿದ್ದಾರೆ.

ಇನ್ನೂ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಡಾ.ಸಿ.ಎನ್‌ ಮಂಜುನಾಥ್‌, ಜಯದೇವ ಹೃದ್ರೋಗ ಆಸ್ಪತ್ರೆ ಜನರ ಆಸ್ಪತ್ರೆಯಾಗಿದೆ. ನಾವು ಪಂಚತಾರಾ ಖಾಸಗಿ ಆಸ್ಪತ್ರೆಯಂತೆ ಮಾಡುವ ಗುರಿ ಇತ್ತು. ಅದು 100 ಕ್ಕೆ100 ಆಗಿದೆ. ಇಲ್ಲಿ ಪ್ರತಿಯೋಬ್ಬರಿಗೂ ಸೇವಾ ಮನೋಭಾವ ಬೆಳಸಲಾಗಿದೆ. ಸರ್ಕಾರದ ಸಹಕಾರ, ದಾನಿಗಳ ಸಹಕಾರದಿಂದ ಇವತ್ತು ಈ ಮಟ್ಟಕ್ಕೆ ಆಸ್ಪತ್ರೆ ಬೆಳೆದಿದೆ. ನಾನು ಇಲ್ಲಿಗೆ ಬಂದಾಗ 300 ಹಾಸಿಗೆ ಇತ್ತು, ಈಗ 2,000 ಸಾವಿರ ಹಾಸಿಗೆಗಳಿವೆ. 3,500 ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ. 16 ವರ್ಷಗಳಲ್ಲಿ 75 ಲಕ್ಷ ಜನರಿಗೆ ಚಿಕಿತ್ಸೆ ನೀಡಿದ್ದೇನೆ. 8 ಲಕ್ಷ ಜನರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದೇನೆ. ಇಷ್ಟು ವರ್ಷಗಳ ಸೇವೆ ಸಂತೋಷ ತಂದಿದೆ ತಮ್ಮ ನೆನಪುಗಳನ್ನ ಹಂಚಿಕೊಂಡಿದ್ದಾರೆ.

ಜಯದೇವ ಸಾಧನೆಯ ಕೇವಲ ಒಬ್ಬನಿಂದಲ್ಲ, ಅದು ಎಲ್ಲರಿಗೂ ಸಲ್ಲಬೇಕು. 1989ರಲ್ಲಿ ಜಯದೇವ ಆಸ್ಪತ್ರೆ ಸೇರಿದಾಗ ನನಗೊಂದು ಕನಸಿತ್ತು. ಆಗ ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯ ಇರಲಿಲ್ಲ. 2005ರಲ್ಲಿ ಆಸ್ಪತ್ರೆ ತ್ಯಜಿಸುವ ಮನಸ್ಸು ಮಾಡಿದ್ದೆ. ಆಗ ಮಾಜಿ ಪ್ರಧಾನಿ ದೇವೇಗೌಡರು ನನ್ನನ್ನ ಇಲ್ಲಿಯೇ ಕೆಲಸ ಮಾಡುವಂತೆ ಸೂಚಿಸಿದ್ದರು. ದೊಡ್ಡವರ ಮಾತು ಕೇಳಿದ್ರೆ ಒಳ್ಳೆದಾಗುತ್ತೆ ಅನ್ನೊದಕ್ಕೆ ದೇವೇಗೌಡರ ಮಾತು ಸಾಕ್ಷಿ. ಆವತ್ತು ಅವರ ಮಾತು ಕೇಳದೇ ಇದ್ದಿದ್ದರೆ, ನಾನು ವಿದೇಶದಲ್ಲಿರುತ್ತಿದ್ದೆ. ದುಡ್ಡು ಮಾಡ್ತಿದ್ದೆ, ಆದ್ರೆ ಇಷ್ಟು ಪ್ರೀತಿ ಸಿಗುತ್ತಿರಲಿಲ್ಲ. ಸಂಪತ್ತಿಗೆ ಬೆಲೆ ಕಟ್ಟಬಹುದು. ಆದ್ರೆ ಸರಳತೆ ಸಾಧನೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ನೋವು ನಮಗೆ ಗೊತ್ತಾದ್ರೆ ಜೀವಂತವಾಗಿದ್ದೀವಿ ಎಂದರ್ಥ, ಬೇರೆಯವದ ನೋವು ಗೊತ್ತಾದ್ರೆ ನಾವು ಮನುಷ್ಯರಾಗಿದ್ದೀವೆ ಎಂದರ್ಥ ಎಂದು ಭಾವುಕರಾದರು

ಜಯದೇವ ಆಸ್ಪತ್ರೆ ನಿರ್ದೇಶಕರ ಹುದ್ದೆಗೆ ಪೈಪೋಟಿ ಆರಂಭವಾಗಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ನಡುವೆ ಮೈಸೂರು ಮೂಲದ ಸಿಎಂ ಆಪ್ತರಿಗೆ ನಿರ್ದೇಶಕರ ಹುದ್ದೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಅನ್ನೋ ಚರ್ಚೆ ಜೋರಾಗಿದೆ. ಚುನಾವಣೆಗೆ ಸ್ಪರ್ಧಿಸ್ತಾರೆ ಎಂಬ ಚರ್ಚೆ ಜೋರಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಾ.ಮಂಜುನಾಥ್ ಅವರು, ಆ ರೀತಿ ಏನಿಲ್ಲ ಚುನಾವಣೆಗೆ ನಿಲ್ಲೊಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

– ಅಂತರ್ಜಾಲ ಮಾಹಿತಿ

With an association of more than 25 years with Jayadeva Institute of Cardiovascular Sciences and Research coming to an end on January 31, its director, Dr CN Manjunath, said as the head of the institute for the last 16 years, the hospital witnessed 500 per cent development.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

5 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

13 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

15 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

20 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

22 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago