ಸಂಪಾಜೆ ಬಳಿಯ ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ಮತ್ತು ಹೈಡ್ರೋಪೋನಿಕ್ಸ್ ಘಟಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ದೀಪಾವಳಿಯ ಸಂದರ್ಭ ವಿಶೇಷ ಗೋಪೂಜೆ ಗೋಸೂಕ್ತ ಪಠಣ, ರುದ್ರಪಾರಾಯಣ, ವೇಣುಗೋಪಾಲ ಪೂಜೆ ನಡೆಯಿತು. ಸುಮಾರು 50 ಕ್ಕೂ ಹೆಚ್ಚು ಗೋಭಕ್ತರು ಭಾಗವಹಿಸಿದ್ದರು.ಇದೇ ವೇಳೆ ಕೃಷಿಭೂಮಿ ಮಾರಾಟ ಖರೀದಿ ವಾಟ್ಸಪ್ ಗುಂಪಿನ ವತಿಯಿಂದ ಕೊಡುಗೆಯಾಗಿ ನೀಡಲಾದ ಹೈಡ್ರೋಪೋನಿಕ್ಸ್ ಘಟಕ ಉದ್ಘಾಟಿಸಲಾಯಿತು.
ಹೈಡ್ರೋಪೋನಿಕ್ಸ್ ಮೂಲಕ ಮಣ್ಣನ್ನು ಬಳಸದೆ, ನೀರಿನಲ್ಲಿ ಖನಿಜ ಪುಷ್ಟಿಕಾರಿ ದ್ರಾವಣವನ್ನು ಬಳಸಿಕೊಂಡು ಗೋವಿಗೆ ಅಗತ್ಯವಾದ ಮೇವುಗಳನ್ನು ಬೆಳೆಸುವ ವಿಧಾನವನ್ನು ಗೋಶಾಲೆಯಲ್ಲಿ ಅನುಷ್ಟಾನ ಮಾಡಲಾಗುತ್ತಿದೆ.
ಈ ಸಂದರ್ಭ ಗೋಶಾಲೆಯ ಆಡಳಿತವ ಸಮಿತಿ ಅಧ್ಯಕ್ಷ ರಾಜಾರಾಮ ಭಟ್, ಕಾರ್ಯದರ್ಶಿ ವಿಜಯಕೃಷ್ಣ ಮೊದಲಾದವರು ಇದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…