ಸಂಪಾಜೆ ಬಳಿಯ ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ಮತ್ತು ಹೈಡ್ರೋಪೋನಿಕ್ಸ್ ಘಟಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ದೀಪಾವಳಿಯ ಸಂದರ್ಭ ವಿಶೇಷ ಗೋಪೂಜೆ ಗೋಸೂಕ್ತ ಪಠಣ, ರುದ್ರಪಾರಾಯಣ, ವೇಣುಗೋಪಾಲ ಪೂಜೆ ನಡೆಯಿತು. ಸುಮಾರು 50 ಕ್ಕೂ ಹೆಚ್ಚು ಗೋಭಕ್ತರು ಭಾಗವಹಿಸಿದ್ದರು.ಇದೇ ವೇಳೆ ಕೃಷಿಭೂಮಿ ಮಾರಾಟ ಖರೀದಿ ವಾಟ್ಸಪ್ ಗುಂಪಿನ ವತಿಯಿಂದ ಕೊಡುಗೆಯಾಗಿ ನೀಡಲಾದ ಹೈಡ್ರೋಪೋನಿಕ್ಸ್ ಘಟಕ ಉದ್ಘಾಟಿಸಲಾಯಿತು.
ಹೈಡ್ರೋಪೋನಿಕ್ಸ್ ಮೂಲಕ ಮಣ್ಣನ್ನು ಬಳಸದೆ, ನೀರಿನಲ್ಲಿ ಖನಿಜ ಪುಷ್ಟಿಕಾರಿ ದ್ರಾವಣವನ್ನು ಬಳಸಿಕೊಂಡು ಗೋವಿಗೆ ಅಗತ್ಯವಾದ ಮೇವುಗಳನ್ನು ಬೆಳೆಸುವ ವಿಧಾನವನ್ನು ಗೋಶಾಲೆಯಲ್ಲಿ ಅನುಷ್ಟಾನ ಮಾಡಲಾಗುತ್ತಿದೆ.
ಈ ಸಂದರ್ಭ ಗೋಶಾಲೆಯ ಆಡಳಿತವ ಸಮಿತಿ ಅಧ್ಯಕ್ಷ ರಾಜಾರಾಮ ಭಟ್, ಕಾರ್ಯದರ್ಶಿ ವಿಜಯಕೃಷ್ಣ ಮೊದಲಾದವರು ಇದ್ದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…