ಸಂಪಾಜೆ ಬಳಿಯ ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ಮತ್ತು ಹೈಡ್ರೋಪೋನಿಕ್ಸ್ ಘಟಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ದೀಪಾವಳಿಯ ಸಂದರ್ಭ ವಿಶೇಷ ಗೋಪೂಜೆ ಗೋಸೂಕ್ತ ಪಠಣ, ರುದ್ರಪಾರಾಯಣ, ವೇಣುಗೋಪಾಲ ಪೂಜೆ ನಡೆಯಿತು. ಸುಮಾರು 50 ಕ್ಕೂ ಹೆಚ್ಚು ಗೋಭಕ್ತರು ಭಾಗವಹಿಸಿದ್ದರು.ಇದೇ ವೇಳೆ ಕೃಷಿಭೂಮಿ ಮಾರಾಟ ಖರೀದಿ ವಾಟ್ಸಪ್ ಗುಂಪಿನ ವತಿಯಿಂದ ಕೊಡುಗೆಯಾಗಿ ನೀಡಲಾದ ಹೈಡ್ರೋಪೋನಿಕ್ಸ್ ಘಟಕ ಉದ್ಘಾಟಿಸಲಾಯಿತು.
ಹೈಡ್ರೋಪೋನಿಕ್ಸ್ ಮೂಲಕ ಮಣ್ಣನ್ನು ಬಳಸದೆ, ನೀರಿನಲ್ಲಿ ಖನಿಜ ಪುಷ್ಟಿಕಾರಿ ದ್ರಾವಣವನ್ನು ಬಳಸಿಕೊಂಡು ಗೋವಿಗೆ ಅಗತ್ಯವಾದ ಮೇವುಗಳನ್ನು ಬೆಳೆಸುವ ವಿಧಾನವನ್ನು ಗೋಶಾಲೆಯಲ್ಲಿ ಅನುಷ್ಟಾನ ಮಾಡಲಾಗುತ್ತಿದೆ.
ಈ ಸಂದರ್ಭ ಗೋಶಾಲೆಯ ಆಡಳಿತವ ಸಮಿತಿ ಅಧ್ಯಕ್ಷ ರಾಜಾರಾಮ ಭಟ್, ಕಾರ್ಯದರ್ಶಿ ವಿಜಯಕೃಷ್ಣ ಮೊದಲಾದವರು ಇದ್ದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…