Advertisement
ಧಾರ್ಮಿಕ

ಸಂನ್ಯಾಸ ಗ್ರಹಣದ 29ನೇ ಪರ್ವ | ಆರ್ತ ಕುಟುಂಬಕ್ಕೆ ಜೀವನದಾನ | ಜೀವಜಗತ್ತಿಗೆ ಒಳಿತು ಮಾಡುವುದೇ ನಿಜವಾದ ಪೂಜೆ : ರಾಘವೇಶ್ವರ ಶ್ರೀ |

Share

ಜನ್ಮದಿನವನ್ನು ಬಗೆ ಬಗೆಯಾಗಿ ಆಚರಿಸುತ್ತಾರೆ. ಆದರೆ ಜನ್ಮದಿನದಂದು ಮಾತ್ರವಲ್ಲದೇ ಜೀವನವಿಡೀ ನಮ್ಮಿಂದಾದ ಒಳಿತು ಮಾಡುವುದೇ ನಿಜವಾಗಿ ಪರಮೇಶ್ವರನ ಪೂಜೆ ಎಂದು ರಾಮಚಂದ್ರಾಪುರ ಮಠಧ  ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.

ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ 29ನೇ ಸಂನ್ಯಾಸ ಗ್ರಹಣ ದಿನದ ಪುಣ್ಯ ಪರ್ವದಂದು ಪ್ರತಿ ವರ್ಷದಂತೆ ಆರ್ತರೊಬ್ಬರ ಕುಟುಂಬಕ್ಕೆ ಅಭಯ ನೀಡಿ, ಅವರ ಜನರ ಜೀವನಕ್ಕೆ ನೆರವಾಗುವ ಜೀವಕಾರುಣ್ಯದ ಯೋಜನೆ ಜೀವನದಾನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಶುಭಕೃತ್ ಸಂವತ್ಸರದ ಜೀವನದಾನ ಇಂದು ನಡೆಯುತ್ತಿದೆ. ಜನ್ಮದಿನವನ್ನು ವಿವಿಧ ಬಗೆಯಾಗಿ ಆಚರಿಸುತ್ತಾರೆ. ಹುಟ್ಟಿದ ದಿನವನ್ನು ಮಾತ್ರವಲ್ಲ, ಬದುಕೆಲ್ಲ ಶುಭವನ್ನು ಮಾಡುವುದು ಮುಖ್ಯ. ಸುತ್ತಮುತ್ತಲ ಜೀವಜಗತ್ತಿಗೆ ನಮ್ಮಿಂದಾದ ಒಳಿತು ಮಾಡುವುದೇ ನಿಜವಾಗಿ ಪರಮೇಶ್ವರನ ಪೂಜೆ. ಭಯಮುಕ್ತ, ದುಃಖಮುಕ್ತವಾಗಿ, ಶುಭಕೃತ್ ಶಂಕರರಾಗಿ, ತಮಗೆ, ಕುಟುಂಬಕ್ಕೆ, ಊರಿಗೆ, ಗ್ರಾಮಕ್ಕೆ ಒಳಿತು ಮಾಡುವ ಪಣ ತೊಡುವಂತೆ ಕರೆ ನೀಡಿದರು.

ರಾಮ ಶುಭವನ್ನು ನೀಡುವವನು. ರಾಮನ ಪದಸ್ಪರ್ಶದಿಂದ ಲಂಕೆಯೂ ರಾಮರಾಜ್ಯವಾಗಿದೆ. ಗಂಗೆಯಾಚೆ ರಾಮ ಹೆಜ್ಜೆ ಇಟ್ಟಾಗ ಕಲ್ಪತರು ಜನಿಸಿದರೆ, ದಕ್ಷಿಣದಲ್ಲಿ ಕಂಟಕವೆಂಬ ಮುಳ್ಳನ್ನು ಕಿತ್ತು ಅವರ ಬಾಳು ಕೂಡಾ ಬೆಳಕಾಗಿದೆ. ನಾವು ಸಿಹಿ ತಿಂದು ಜನ್ಮದಿನ ಆಚರಿಸುವುದಕ್ಕಿಂತ ಬೇರೆಯವರ ಬಾಳಿಗೆ ಸವಿ ತರುವುದು ಮುಖ್ಯ. ಶ್ರೀಶಂಕರರ ಜೀವನವೇ ಒಂದು ಉಪದೇಶ. ಶಂ ಎಂದರೆ ಶುಭ; ಕರ ಎಂದರೆ ಮಾಡುವವನು. ಅಂದರೆ ಶುಭ ಮಾಡು ಎನ್ನುವುದೇ ಅವರ ಜೀವನ ಸಂದೇಶ ಎಂದು ಬಣ್ಣಿಸಿದರು. ಶುಭಂಕರತ್ವ, ಶಂಕರತ್ವ ಬಾಳಿನಲ್ಲಿ ಮುಖ್ಯ ಎಂದರು.

ಆರ್ತ ಕುಟುಂಬದ ಕಣ್ಣೀರು ಒರೆಸುವ ಮೂಲಕ ಸಂನ್ಯಾಸ ಸ್ವೀಕಾರ ದಿನವನ್ನು ಆಚರಿಸಲಾಗುತ್ತಿದೆ. ಅವರ ಜೀವನ ಬೆಳಕಾಗಲಿ; ಬೇಗೆಯಲಿ ಬೇಯದಿರಲಿ ಎಂದು ಆಶಿಸುವುದೇ ಇಂದಿನ ಆಚರಣೆ. ಅವರ ಬದುಕಿನ ಕಷ್ಟ ದೂರ ಮಾಡುವ ಪ್ರಮಾಣ ಮಾಡುವ ದಿನ ಎಂದು ಹೇಳಿದರು.

ಶ್ರೀಮಠದ ಸಿಇಓ ಕೆ.ಜಿ.ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾತಿ ಮತ ಬೇಧವಿಲ್ಲದೇ ಆರ್ತರನ್ನು ಗುರುತಿಸಿ ಪ್ರತಿ ವರ್ಷ ಒಬ್ಬರಿಗೆ ಜೀವನದಾನ ನೀಡಿ ಅವರ ಇಡೀ ಜೀವನ ನಿರ್ವಹಣೆ ಹೊಣೆಯನ್ನು ಟ್ರಸ್ಟ್ ವಹಿಸಿಕೊಳ್ಳುತ್ತದೆ ಎಂದು ಅವರು ಹೇಳಿದರು. ಹೊನ್ನಾವರ ತಾಲೂಕಿನ ಯಶೋಧಾ ಹೆಗಡೆ ಅವರಿಗೆ ಜೀವನದಾನ ಪ್ರದಾನ ಮಾಡಲಾಯಿತು. ಟ್ರಸ್ಟಿಗಳಾದ ಎಸ್.ಎಸ್.ಹೆಗಡೆ, ಆರ್.ಜಿ.ಹೆಗಡೆ, ಶ್ರೀಕಾಂತ ಹೆಗಡೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ಮತ್ತಿತರರು ಉಪಸ್ಥಿತರಿದ್ದರು.

ಎಸ್.ಜಿ.ಭಟ್ ಕಬ್ಬಿನಹಿತ್ಲು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

27 minutes ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 hour ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

4 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

8 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

8 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

19 hours ago