Advertisement
ಧಾರ್ಮಿಕ

ಸಂನ್ಯಾಸ ಗ್ರಹಣದ 29ನೇ ಪರ್ವ | ಆರ್ತ ಕುಟುಂಬಕ್ಕೆ ಜೀವನದಾನ | ಜೀವಜಗತ್ತಿಗೆ ಒಳಿತು ಮಾಡುವುದೇ ನಿಜವಾದ ಪೂಜೆ : ರಾಘವೇಶ್ವರ ಶ್ರೀ |

Share

ಜನ್ಮದಿನವನ್ನು ಬಗೆ ಬಗೆಯಾಗಿ ಆಚರಿಸುತ್ತಾರೆ. ಆದರೆ ಜನ್ಮದಿನದಂದು ಮಾತ್ರವಲ್ಲದೇ ಜೀವನವಿಡೀ ನಮ್ಮಿಂದಾದ ಒಳಿತು ಮಾಡುವುದೇ ನಿಜವಾಗಿ ಪರಮೇಶ್ವರನ ಪೂಜೆ ಎಂದು ರಾಮಚಂದ್ರಾಪುರ ಮಠಧ  ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.

ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ 29ನೇ ಸಂನ್ಯಾಸ ಗ್ರಹಣ ದಿನದ ಪುಣ್ಯ ಪರ್ವದಂದು ಪ್ರತಿ ವರ್ಷದಂತೆ ಆರ್ತರೊಬ್ಬರ ಕುಟುಂಬಕ್ಕೆ ಅಭಯ ನೀಡಿ, ಅವರ ಜನರ ಜೀವನಕ್ಕೆ ನೆರವಾಗುವ ಜೀವಕಾರುಣ್ಯದ ಯೋಜನೆ ಜೀವನದಾನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಶುಭಕೃತ್ ಸಂವತ್ಸರದ ಜೀವನದಾನ ಇಂದು ನಡೆಯುತ್ತಿದೆ. ಜನ್ಮದಿನವನ್ನು ವಿವಿಧ ಬಗೆಯಾಗಿ ಆಚರಿಸುತ್ತಾರೆ. ಹುಟ್ಟಿದ ದಿನವನ್ನು ಮಾತ್ರವಲ್ಲ, ಬದುಕೆಲ್ಲ ಶುಭವನ್ನು ಮಾಡುವುದು ಮುಖ್ಯ. ಸುತ್ತಮುತ್ತಲ ಜೀವಜಗತ್ತಿಗೆ ನಮ್ಮಿಂದಾದ ಒಳಿತು ಮಾಡುವುದೇ ನಿಜವಾಗಿ ಪರಮೇಶ್ವರನ ಪೂಜೆ. ಭಯಮುಕ್ತ, ದುಃಖಮುಕ್ತವಾಗಿ, ಶುಭಕೃತ್ ಶಂಕರರಾಗಿ, ತಮಗೆ, ಕುಟುಂಬಕ್ಕೆ, ಊರಿಗೆ, ಗ್ರಾಮಕ್ಕೆ ಒಳಿತು ಮಾಡುವ ಪಣ ತೊಡುವಂತೆ ಕರೆ ನೀಡಿದರು.

ರಾಮ ಶುಭವನ್ನು ನೀಡುವವನು. ರಾಮನ ಪದಸ್ಪರ್ಶದಿಂದ ಲಂಕೆಯೂ ರಾಮರಾಜ್ಯವಾಗಿದೆ. ಗಂಗೆಯಾಚೆ ರಾಮ ಹೆಜ್ಜೆ ಇಟ್ಟಾಗ ಕಲ್ಪತರು ಜನಿಸಿದರೆ, ದಕ್ಷಿಣದಲ್ಲಿ ಕಂಟಕವೆಂಬ ಮುಳ್ಳನ್ನು ಕಿತ್ತು ಅವರ ಬಾಳು ಕೂಡಾ ಬೆಳಕಾಗಿದೆ. ನಾವು ಸಿಹಿ ತಿಂದು ಜನ್ಮದಿನ ಆಚರಿಸುವುದಕ್ಕಿಂತ ಬೇರೆಯವರ ಬಾಳಿಗೆ ಸವಿ ತರುವುದು ಮುಖ್ಯ. ಶ್ರೀಶಂಕರರ ಜೀವನವೇ ಒಂದು ಉಪದೇಶ. ಶಂ ಎಂದರೆ ಶುಭ; ಕರ ಎಂದರೆ ಮಾಡುವವನು. ಅಂದರೆ ಶುಭ ಮಾಡು ಎನ್ನುವುದೇ ಅವರ ಜೀವನ ಸಂದೇಶ ಎಂದು ಬಣ್ಣಿಸಿದರು. ಶುಭಂಕರತ್ವ, ಶಂಕರತ್ವ ಬಾಳಿನಲ್ಲಿ ಮುಖ್ಯ ಎಂದರು.

ಆರ್ತ ಕುಟುಂಬದ ಕಣ್ಣೀರು ಒರೆಸುವ ಮೂಲಕ ಸಂನ್ಯಾಸ ಸ್ವೀಕಾರ ದಿನವನ್ನು ಆಚರಿಸಲಾಗುತ್ತಿದೆ. ಅವರ ಜೀವನ ಬೆಳಕಾಗಲಿ; ಬೇಗೆಯಲಿ ಬೇಯದಿರಲಿ ಎಂದು ಆಶಿಸುವುದೇ ಇಂದಿನ ಆಚರಣೆ. ಅವರ ಬದುಕಿನ ಕಷ್ಟ ದೂರ ಮಾಡುವ ಪ್ರಮಾಣ ಮಾಡುವ ದಿನ ಎಂದು ಹೇಳಿದರು.

ಶ್ರೀಮಠದ ಸಿಇಓ ಕೆ.ಜಿ.ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾತಿ ಮತ ಬೇಧವಿಲ್ಲದೇ ಆರ್ತರನ್ನು ಗುರುತಿಸಿ ಪ್ರತಿ ವರ್ಷ ಒಬ್ಬರಿಗೆ ಜೀವನದಾನ ನೀಡಿ ಅವರ ಇಡೀ ಜೀವನ ನಿರ್ವಹಣೆ ಹೊಣೆಯನ್ನು ಟ್ರಸ್ಟ್ ವಹಿಸಿಕೊಳ್ಳುತ್ತದೆ ಎಂದು ಅವರು ಹೇಳಿದರು. ಹೊನ್ನಾವರ ತಾಲೂಕಿನ ಯಶೋಧಾ ಹೆಗಡೆ ಅವರಿಗೆ ಜೀವನದಾನ ಪ್ರದಾನ ಮಾಡಲಾಯಿತು. ಟ್ರಸ್ಟಿಗಳಾದ ಎಸ್.ಎಸ್.ಹೆಗಡೆ, ಆರ್.ಜಿ.ಹೆಗಡೆ, ಶ್ರೀಕಾಂತ ಹೆಗಡೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ಮತ್ತಿತರರು ಉಪಸ್ಥಿತರಿದ್ದರು.

ಎಸ್.ಜಿ.ಭಟ್ ಕಬ್ಬಿನಹಿತ್ಲು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 hour ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

2 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

3 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

9 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

15 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago