ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

June 8, 2026
8:48 PM
ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ ಬಾರಿಗೆ ಬ್ರಿಟನ್‌ಗೆ ರಫ್ತಾಗಿವೆ. APEDA ನೆರವಿನಿಂದ ನಡೆದ ಈ ರಫ್ತು ರೈತರಿಗೆ ಜಾಗತಿಕ ಮಾರುಕಟ್ಟೆಯ ಬಾಗಿಲು ತೆರೆದಿದೆ.

ಭಾರತದ ಕೃಷಿ ರಫ್ತು ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ಝಾರ್ಖಂಡ್ ರಾಜ್ಯದಿಂದ ಮೊದಲ ಬಾರಿಗೆ ತಾಜಾ ಮಾವಿನ ವಾಣಿಜ್ಯ ರಫ್ತು ಯುನೈಟೆಡ್ ಕಿಂಗ್‌ಡಮ್‌ಗೆ ನಡೆದಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಧೀನದಲ್ಲಿರುವ APEDA ಈ ಐತಿಹಾಸಿಕ ರಫ್ತಿಗೆ ನೆರವು ನೀಡಿದೆ.

ಝಾರ್ಖಂಡ್‌ನ ಸಿಮ್ಡೆಗಾ ಜಿಲ್ಲೆಯ ಬಾನೋ ಬ್ಲಾಕ್‌ನ ಮಹಿಳೆಯರ ನೇತೃತ್ವದ ರೈತ ಉತ್ಪಾದಕರ ಕಂಪನಿಯಿಂದ 1.5 ಮೆಟ್ರಿಕ್ ಟನ್ ‘ಆಮ್ರಪಾಲಿ’ ತಳಿಯ ತಾಜಾ ಮಾವುಗಳನ್ನು ಲಂಡನ್‌ಗೆ ರಫ್ತು ಮಾಡಲಾಗಿದೆ. ಈ ರಫ್ತು ಕಾರ್ಯವನ್ನು ಕೋಲ್ಕತ್ತಾ ಮೂಲದ ಖಾಸಗಿ ಸಂಸ್ಥೆ ಮೂಲಕ ಕೈಗೊಳ್ಳಲಾಗಿದೆ.

2026ರ ಮೇ 5ರಂದು APEDA ಆಯೋಜಿಸಿದ್ದ ರಫ್ತು-ಕೇಂದ್ರಿತ ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮದ ಬಳಿಕ ಈ ರಫ್ತು ಸಾಧ್ಯವಾಗಿದೆ. ರೈತ ಉತ್ಪಾದಕರ ಸಂಸ್ಥೆಗಳು (FPO), ಎಫ್‌ಪಿಸಿಗಳು ಹಾಗೂ ಪ್ರಗತಿಪರ ರೈತರಿಗೆ ರಫ್ತು ಮಾನದಂಡಗಳು, ಗುಣಮಟ್ಟ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆ ಅವಕಾಶಗಳ ಕುರಿತು ತರಬೇತಿ ನೀಡಲಾಗಿತ್ತು.

ಈ ಉಪಕ್ರಮದ ಮೂಲಕ ರೈತರಿಗೆ ಜಾಗತಿಕ ಮಾರುಕಟ್ಟೆಗೆ ನೇರ ಪ್ರವೇಶ ದೊರೆತಿದ್ದು, ದೇಶೀಯ ಮಾರುಕಟ್ಟೆಗೆ ಹೋಲಿಸಿದರೆ ಉತ್ತಮ ಬೆಲೆ ಸಿಗುವ ಅವಕಾಶ ಸೃಷ್ಟಿಯಾಗಿದೆ. ಜೊತೆಗೆ ಗುಣಮಟ್ಟದ ಉತ್ಪಾದನೆ, ಕೊಯ್ಲಿನ ನಂತರದ ನಿರ್ವಹಣೆ ಹಾಗೂ ಅಂತರರಾಷ್ಟ್ರೀಯ ಗುಣಮಟ್ಟದ ಮಾನದಂಡಗಳನ್ನು ಅನುಸರಿಸಲು ರೈತರಿಗೆ ಪ್ರೋತ್ಸಾಹ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌

ತೋಟಗಾರಿಕೆಗೆ ಅನುಕೂಲಕರ ಹವಾಮಾನ ಹೊಂದಿರುವ ಝಾರ್ಖಂಡ್‌ನಲ್ಲಿ ಬೆಳೆಯುವ ಆಮ್ರಪಾಲಿ ಮಾವು ಉತ್ತಮ ಗುಣಮಟ್ಟ ಮತ್ತು ರುಚಿಗಾಗಿ ಪ್ರಸಿದ್ಧವಾಗಿದೆ. ಈ ರಫ್ತಿನೊಂದಿಗೆ ಝಾರ್ಖಂಡ್ ಕೂಡ ಅಂತರರಾಷ್ಟ್ರೀಯ ಹಣ್ಣು ರಫ್ತು ಮಾಡುವ ರಾಜ್ಯಗಳ ಪಟ್ಟಿಗೆ ಸೇರ್ಪಡೆಯಾಗಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌  ಗೋಯಲ್ ಈ ಸಾಧನೆಯನ್ನು ಶ್ಲಾಘಿಸಿದ್ದು, “Local Goes Global” ಪರಿಕಲ್ಪನೆಯ ಯಶಸ್ವಿ ಉದಾಹರಣೆ ಎಂದು ಬಣ್ಣಿಸಿದ್ದಾರೆ.

Jharkhand has exported fresh mangoes to the United Kingdom for the first time, marking a major milestone in the state’s agricultural export journey. A women-led Farmer Producer Company from Simdega exported 1.5 metric tonnes of Amrapali mangoes with APEDA’s support, providing farmers access to international markets and better returns

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ..! ಜೂನ್ 8-11ರ ನಡುವೆ ಭಾರೀ ಮಳೆ ಸಾಧ್ಯತೆ | ರೈತರಿಗೆ ಹವಾಮಾನ ಇಲಾಖೆ ಎಚ್ಚರಿಕೆ
June 8, 2026
8:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ
ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror