Advertisement
MIRROR FOCUS

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

Share

ಭಾರತದ ಕೃಷಿ ರಫ್ತು ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ಝಾರ್ಖಂಡ್ ರಾಜ್ಯದಿಂದ ಮೊದಲ ಬಾರಿಗೆ ತಾಜಾ ಮಾವಿನ ವಾಣಿಜ್ಯ ರಫ್ತು ಯುನೈಟೆಡ್ ಕಿಂಗ್‌ಡಮ್‌ಗೆ ನಡೆದಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಧೀನದಲ್ಲಿರುವ APEDA ಈ ಐತಿಹಾಸಿಕ ರಫ್ತಿಗೆ ನೆರವು ನೀಡಿದೆ.

ಝಾರ್ಖಂಡ್‌ನ ಸಿಮ್ಡೆಗಾ ಜಿಲ್ಲೆಯ ಬಾನೋ ಬ್ಲಾಕ್‌ನ ಮಹಿಳೆಯರ ನೇತೃತ್ವದ ರೈತ ಉತ್ಪಾದಕರ ಕಂಪನಿಯಿಂದ 1.5 ಮೆಟ್ರಿಕ್ ಟನ್ ‘ಆಮ್ರಪಾಲಿ’ ತಳಿಯ ತಾಜಾ ಮಾವುಗಳನ್ನು ಲಂಡನ್‌ಗೆ ರಫ್ತು ಮಾಡಲಾಗಿದೆ. ಈ ರಫ್ತು ಕಾರ್ಯವನ್ನು ಕೋಲ್ಕತ್ತಾ ಮೂಲದ ಖಾಸಗಿ ಸಂಸ್ಥೆ ಮೂಲಕ ಕೈಗೊಳ್ಳಲಾಗಿದೆ.

2026ರ ಮೇ 5ರಂದು APEDA ಆಯೋಜಿಸಿದ್ದ ರಫ್ತು-ಕೇಂದ್ರಿತ ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮದ ಬಳಿಕ ಈ ರಫ್ತು ಸಾಧ್ಯವಾಗಿದೆ. ರೈತ ಉತ್ಪಾದಕರ ಸಂಸ್ಥೆಗಳು (FPO), ಎಫ್‌ಪಿಸಿಗಳು ಹಾಗೂ ಪ್ರಗತಿಪರ ರೈತರಿಗೆ ರಫ್ತು ಮಾನದಂಡಗಳು, ಗುಣಮಟ್ಟ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆ ಅವಕಾಶಗಳ ಕುರಿತು ತರಬೇತಿ ನೀಡಲಾಗಿತ್ತು.

ಈ ಉಪಕ್ರಮದ ಮೂಲಕ ರೈತರಿಗೆ ಜಾಗತಿಕ ಮಾರುಕಟ್ಟೆಗೆ ನೇರ ಪ್ರವೇಶ ದೊರೆತಿದ್ದು, ದೇಶೀಯ ಮಾರುಕಟ್ಟೆಗೆ ಹೋಲಿಸಿದರೆ ಉತ್ತಮ ಬೆಲೆ ಸಿಗುವ ಅವಕಾಶ ಸೃಷ್ಟಿಯಾಗಿದೆ. ಜೊತೆಗೆ ಗುಣಮಟ್ಟದ ಉತ್ಪಾದನೆ, ಕೊಯ್ಲಿನ ನಂತರದ ನಿರ್ವಹಣೆ ಹಾಗೂ ಅಂತರರಾಷ್ಟ್ರೀಯ ಗುಣಮಟ್ಟದ ಮಾನದಂಡಗಳನ್ನು ಅನುಸರಿಸಲು ರೈತರಿಗೆ ಪ್ರೋತ್ಸಾಹ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌

ತೋಟಗಾರಿಕೆಗೆ ಅನುಕೂಲಕರ ಹವಾಮಾನ ಹೊಂದಿರುವ ಝಾರ್ಖಂಡ್‌ನಲ್ಲಿ ಬೆಳೆಯುವ ಆಮ್ರಪಾಲಿ ಮಾವು ಉತ್ತಮ ಗುಣಮಟ್ಟ ಮತ್ತು ರುಚಿಗಾಗಿ ಪ್ರಸಿದ್ಧವಾಗಿದೆ. ಈ ರಫ್ತಿನೊಂದಿಗೆ ಝಾರ್ಖಂಡ್ ಕೂಡ ಅಂತರರಾಷ್ಟ್ರೀಯ ಹಣ್ಣು ರಫ್ತು ಮಾಡುವ ರಾಜ್ಯಗಳ ಪಟ್ಟಿಗೆ ಸೇರ್ಪಡೆಯಾಗಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌  ಗೋಯಲ್ ಈ ಸಾಧನೆಯನ್ನು ಶ್ಲಾಘಿಸಿದ್ದು, “Local Goes Global” ಪರಿಕಲ್ಪನೆಯ ಯಶಸ್ವಿ ಉದಾಹರಣೆ ಎಂದು ಬಣ್ಣಿಸಿದ್ದಾರೆ.

Jharkhand has exported fresh mangoes to the United Kingdom for the first time, marking a major milestone in the state’s agricultural export journey. A women-led Farmer Producer Company from Simdega exported 1.5 metric tonnes of Amrapali mangoes with APEDA’s support, providing farmers access to international markets and better returns

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

2 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

3 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

18 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago