ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್ ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.
ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.
ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…