ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್ ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.
ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.
ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.
₹5 ಕೂಲಿಯಿಂದ ಆರಂಭಿಸಿದ ರೈತ ಈಗ ಆಕ್ಸ್ಫರ್ಡ್ AI ಸಮ್ಮೇಳನದ ವೇದಿಕೆಗೆ. ಪೌಲ್ಟ್ರಿ…
ಆಲಿಕಲ್ಲು ಮಳೆಯಂತಹ ತೀವ್ರ ಹವಾಮಾನದಿಂದ ಬೆಳೆ ರಕ್ಷಿಸಲು ಆಂಟಿ-ಹೈಲ್ ನೆಟ್ ಪ್ರಮುಖ ತಂತ್ರಜ್ಞಾನವಾಗಿ…
ದೇಶಾದ್ಯಂತ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದ್ದು, ಅನೇಕ ರಾಜ್ಯಗಳಲ್ಲಿ ಮಳೆ, ಗುಡುಗು ಹಾಗೂ…
ರಾಜ್ಯದಲ್ಲಿ ಸಧ್ಯಕ್ಕೆ ಮಳೆ ಕಡಿಮೆಯಾಗಿದ್ದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದೆ. ಇಂದು…
ಉತ್ತಮ ಗುಣಮಟ್ಟದ ಅಡಿಕೆಗಳಿಗೆ ₹530 ದರ ಸ್ಥಿರವಾಗಿದ್ದು ಹೊಸ ಅಡಿಕೆಗೆ ಸ್ಪಷ್ಟ ಬೇಡಿಕೆ…
ಹೊಸ ತಂತ್ರಜ್ಞಾನಗಳಿಂದ ಕಾಳುಮೆಣಸು ಕೃಷಿಯಲ್ಲಿ ಇಳುವರಿ ಮೂರು ಪಟ್ಟು ಹೆಚ್ಚಾಗುವ ಸಾಧ್ಯತೆ ಕಂಡುಬಂದಿದ್ದು,…