ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್ ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.
ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.
ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.