ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್ ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.
ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.
ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…