ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್ ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.
ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.
ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…