ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್ ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.
ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.
ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…