Advertisement
Opinion

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |

Share

ಈ ವಿಡಿಯೋ ನೋಡಿ… ಸುಡುಮಣ್ಣೂ ಆಯ್ತು, ಕಸಗಳ ವಿಲೇವಾರಿಯೂ ಆಯ್ತು ಎಂದು ತೋಟದ ಮಧ್ಯೆ ಸಿಬ್ಬಂದಿಗಳು ಎಲೆಕಸಗಳಿಗೆ(Dry leaf waste) ಬೆಂಕಿ(Fire) ಕೊಟ್ಟಿದ್ದರು. ಅಲ್ಲೇ ಸಮೀಪದ ಮುಂಡಕ್ಕಿ ಹಣ್ಣಿನ ಗಿಡ (ಗುಡ್ಡ ನೇರಳೆ, ಮೀನಂಗಿ, Syzygium zeylanicum, Cat eye fruit)ಕ್ಕೆ ಘಾತವಾಯಿತು . ಸ್ನೇಹಿತರೊಬ್ಬರು ಆ ಬೀಜದ ಗಿಡ ಕೊಟ್ಟಿದ್ದರು. ಅದನ್ನು ನೆಟ್ಟು ಕೆಲವು ವರ್ಷಗಳೇ ಆಗಿತ್ತು. ಬಾಲ್ಯದಲ್ಲಿ ಅಜ್ಜನ ಮನೆ ಪರಿಸರದಲ್ಲಿ ಸಿಕ್ಕಾಪಟ್ಟೆ ಅದರ ಹಣ್ಣುಗಳನ್ನು ತಿಂದ ಕಾರಣ ಆ ಗಿಡದ ಮೇಲೆ ವಿಶೇಷ ಮೋಹವಿತ್ತು. ಏನು ಮಾಡಲಿ, ಈ ಬಿರು ಬೇಸಗೆಗೆ ಗಿಡ ಹೀಗೆ ಸೋತು ಹೋದರೆ ಬದುಕಿ ಉಳಿಯುತ್ತದೋ ಎನ್ನುವ ಅನುಮಾನ ಇತ್ತು. ಆ ದುಃಖದಲ್ಲಿ 2 ವಾರ ಕಳೆದು ಹೋಯ್ತು.

ಪ್ರತೀ 15 ದಿನಗಳಿಗೊಮ್ಮೆ ಗೋಕೃಪಾಮೃತ ( ಸುಲಭದ ಭಾಷೆಗೆ ಜೀವಾಮೃತ ಎನ್ನಿ)ವನ್ನು ತೆಂಗು, ತರಕಾರಿ, ಹೂಗಿಡಗಳಿಗೆ ಹಾಕುವುದು ಅಭ್ಯಾಸವಾಗಿದೆ. 100ಲೀಟರ್ ಡ್ರಮ್ಮಿನಲ್ಲಿ ಒಂದೈದು ಲೀಟರ್ ಇರುವಾಗಲೇ ಪುನಃ 1ಕೇಜಿ ಬೆಲ್ಲ, 1ಕೇಜಿ ಕಡಲೆಹಿಟ್ಟು , ನೀರು ಬೆರಸಿ ಯಾವಾಗಲೂ ಜೀವಾಮೃತ ಸಿದ್ಧವಿರುತ್ತದೆ. ನೋಡಿಯೇ ಬಿಡೋಣವೆಂದು ಹಾಗೆಯೇ ಈ ಸೋತುಹೋದ ಮುಂಡಕ್ಕಿ ಹಣ್ಣಿನ ಗಿಡಕ್ಕೆ ಅಂದಾಜು 1 ಲೀಟರ್ ಹಾಕಿದ್ದೆ.

ಒಂದು ವಾರದಲ್ಲಿ ಗಿಡವೆಲ್ಲ ಹೊಸ ಚಿಗುರುಗಳಿಂದ ಕಂಗೊಳಿಸಲು ಶುರುವಾಯ್ತು . ಈ ರೀತಿಯ ಬದಲಾವಣೆ ಎಲ್ಲ ವಿಧದ ಸಸ್ಯ, ಮರಗಳಲ್ಲಿ ಕಂಡಿದ್ದೇನೆ. ಹೆಚ್ಚಾಗಿ ಗಿಡ/ಮರದ ಎಲೆಗಳು ಆ ಗಿಡ/ಮರದ ಬುಡದಲ್ಲೇ ಬಿದ್ದು ಮಣ್ಣು ಫಲವತ್ತಾಗಿರುತ್ತದೆ. ಆ ಫಲವತ್ತತೆಯನ್ನು ಗಿಡಕ್ಕೆ ಒದಗಿಸಿಕೊಡುವ ಕೆಲಸ ( Bioavailability) ಮಾಡುವುದು ಈ ಜೀವಾಮೃತ. ಮಣ್ಣಿನಲ್ಲಿರುವ ಸೂಕ್ಷ್ಮ ಜೀವಿಗಳು ಮತ್ತು ಜೀವಾಮೃತದಲ್ಲಿರುವ ಜೀವಿಗಳು ಜಂಟಿಯಾಗಿ ( ಅವರಿಬ್ಬರ synergistic effect ) ಮಣ್ಣಿನಲ್ಲಿರುವ ಪೋಶಕಾಂಶಗಳು ಇನ್ನಷ್ಷು ಕರಗುವಂತೆ ( soluble) ಮಾಡಿ ಬೇರಿಗೆ ಒದಗಿಸಲು ಸಹಾಯ ಮಾಡುತ್ತವೆ. ಈ ಅಗತ್ಯವಿರುವ ಫಲವತ್ತತೆಯಿಂದ ಹಣ್ಣು, ಹೂವುಗಳ ಗಾತ್ರ, ಸಂಖ್ಯೆ, ಬಣ್ಣ, ಸುವಾಸನೆಯಲ್ಲಿ ಹೆಚ್ಚಳ ನಿಚ್ಚಳ. ತೆಂಗು, ಅಡಿಕೆಯಂತಹ ಏಕದಳ ಮರಗಳ ( ಬೇರು ಆಳಕ್ಕಿರುವುದಿಲ್ಲ ) ಸೋಗೆ ( ಎಲೆ, ಹೆಡೆ)ಗಳನ್ನು ಅವುಗಳ ಬುಡದಲ್ಲೇ ಕೊಚ್ಚಿಹಾಕಿ ಎರಡು ತಿಂಗಳಿಗೊಮ್ಮೆ ಜೀವಾಮೃತ ಮಾತ್ರ ಹಾಕಿ ( ಬೇರೆ ಗೊಬ್ಬರ, ಸಿಂಪಡಣೆ ಇಲ್ಲ) ಅಧಿಕ, ರೋಗರಹಿತ ಬೆಳೆ ತೆಗೆಯುವವರಿದ್ದಾರೆ.ಜೀವಾಮೃತದಿಂದ ಈ ವರ್ಷದ ಹೊಸ ಪಾಠ ಏನೆಂದರೆ ಗಿಡ/ಮರಗಳನ್ನು ಬಿಸಿ ಮತ್ತು ಬರ(ನೀರಿನ ಕೊರತೆ)ಕ್ಕೆ ಸಹಿಷ್ಣುತೆ ಹೆಚ್ಚಿಸುತ್ತದೆಯೆಂದು.

ಪೂರಕ ಮಾಹಿತಿ: ಹಟ್ಟಿ ತೊಳೆದ ನೀರಿನಲ್ಲಿ ಜೀವಾಮೃತದಲ್ಲಿರುವಂತೆ ಸೂಕ್ಷ್ಮ ಜೀವಿಗಳು ಇರುತ್ತವೆ. ಜೀವಾಮೃತದಲ್ಲಿ ಪೋಷಕಾಂಶಗಳು ಹೆಚ್ಚಿರುತ್ತವೆ ಅಂದರೆ ನಾವು ಒದಗಿಸುವ ಬೆಲ್ಲ ಮತ್ತು ಕಡಲೆಹಿಟ್ಟು ( ಯಾವುದೇ ಧಾನ್ಯದ ಹಿಟ್ಟು) ಬೆರಸಿದ ಮಾಧ್ಯಮವು ಬುರುಗುವಿಕೆ( Fermentation)ಗೆ ಒಳಗಾಗಿ ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಪುನರ್ ಜನನ – ಮರಣ ನಿರಂತರ. ಹಾಗೆ ಸಾಯುವಾಗ ಅವುಗಳ ದೇಹದಿಂದ ಕಿಣ್ವಗಳು ( enzymes) ಮತ್ತು ಜೀವಸತ್ವಗಳು ಬಿಡುಗಡೆಯಾಗಿ ಅವೆಲ್ಲ ಮತ್ತೆ ಸಸ್ಯಗಳಿಗೆ ಸಮೃದ್ಧ ಆಹಾರವೇ. ಗೋಬರ್ ಗ್ಯಾಸಿನ ಸ್ಲರಿಯಲ್ಲಿ ಯಾವುದೇ ಸೂಕ್ಷ್ಮ ಜೀವಿಗಳಿರುವುದಿಲ್ಲ.

ಬರಹ :
ಡಾ.ಪಿ. ಮನೋಹರ ಉಪಾಧ್ಯ
, ಮಂಗಳೂರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

52 minutes ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

9 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

17 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago