MIRROR FOCUS

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆ  ಪುನರಾರಂಭಗೊಳ್ಳಲಿವೆ. ದೇಶದ ಉಳಿದ ಭಾಗಗಳಿಗೆ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ – 44 ಅನ್ನು ಮತ್ತೆ ತೆರೆಯಲು ಅಧಿಕಾರಿಗಳು ಕ್ರಮ ವಹಿಸುತ್ತಿದ್ದಾರೆ.

Advertisement

ಭಾರೀ ಗುಡುಗು ಸಹಿತ ಮಳೆ, ಆಲಿಕಲ್ಲು ಮತ್ತು ಹಠಾತ್ ಪ್ರವಾಹ ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳು ಈ ಪ್ರದೇಶದಾದ್ಯಂತ ವ್ಯಾಪಕ ಹಾನಿಯನ್ನುಂಟು ಮಾಡಿವೆ. ರಾಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಲ್ಲಿ ಮೂವರು ಮೃತಪಟ್ಟಿದ್ದಾರೆ. ಆಲಿಕಲ್ಲು ಮತ್ತು ಗುಡುಗು ಸಹಿತ ಭಾರಿ ಮಳೆಯು ಹನ್ನೆರಡಕ್ಕೂ ಹೆಚ್ಚು ಸ್ಥಳಗಳಲ್ಲಿ, ಪ್ರಮುಖವಾಗಿ ನಶ್ರಿ ಮತ್ತು ಬನಿಹಾಲ್ ನಡುವೆ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಹಲವಾರು ಸ್ಥಳಗಳಲ್ಲಿ ಭೂಕುಸಿತ ಮತ್ತು ಮಣ್ಣು ಕುಸಿತಕ್ಕೆ ಕಾರಣವಾಯಿತು. ಇದರಿಂದ ದೇಶದ ಉಳಿದ ಭಾಗದಿಂದ ಕಾಶ್ಮೀರವನ್ನು ಸಂಪರ್ಕಿಸುವ ರಸ್ತೆ ಕಡಿದುಕೊಂಡಂತಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಪಡೆಗಳ ಜೊತೆಗೆ ಪೊಲೀಸ್ ಮತ್ತು ನಾಗರಿಕರ ಜಂಟಿ ಪ್ರಯತ್ನಗಳ ಮೂಲಕ ರಕ್ಷಣಾ ಕಾರ್ಯ ಮುಂದುವರೆದಿದೆ. ಈ ನಡುವೆ ಮತ್ತೆ ಮಳೆಯಾದ ಕಾರಣ ರಕ್ಷಣಾ ಕಾರ್ಯಗಳಿಗೆ ಅಲ್ಪಮಟ್ಟಿಗೆ ಹಿನ್ನಡೆಯಾಗಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

7 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

9 hours ago

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…

9 hours ago

ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…

9 hours ago

ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು | ವಾಹನ ಸವಾರರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…

9 hours ago

ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು

ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…

10 hours ago