Advertisement
MIRROR FOCUS

JN1 ಸೋಂಕಿನಿಂದ ಪ್ರಾಣಾಪಾಯವಿಲ್ಲ | ವೈದ್ಯಕೀಯ ಇಲಾಖಾ ಅಧಿಕಾರಿಗಳ ಜೊತೆ ಮಹತ್ವದ ಸಭೆ | ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಿ – ವೈದ್ಯಕೀಯ ಶಿಕ್ಷಣ ಸಚಿವ |

Share

ರಾಜ್ಯದಲ್ಲಿ(State) ದಿನದಿಂದ ದಿನಕ್ಕೆ ಕೊರೋನಾ ಹೊಸ ರೂಪಾಂತರ ತಳಿಯ ಹಾವಳಿ ಹೆಚ್ಚುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ JN.1 (JN.1) ಸೋಂಕಿಗೆ ಜನ ಆತಂಕಕ್ಕೆ ಒಳಗಾಗದೇ, ಮುನ್ನೆಚ್ಚರಿಕಾ(Precautions) ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ (Sharanprakash Patil) ಸಲಹೆ ನೀಡಿದರು.

ಬೆಂಗಳೂರಿನ (Bengaluru) ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಅಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಸಭೆ ನಡೆಸಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು.

Advertisement

ರೂಪಾಂತರಿ ಜೆಎನ್.1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ತಜ್ಞರು ಹೇಳಿದ್ದಾರೆ. ಆದರೂ ಇದರ ಬಗ್ಗೆ ಮೈ ಮರೆಯದೇ, ಕೆಲ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಕೇಂದ್ರದಿಂದ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ (Covid Vaccine) ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

60 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್‌ ಪಡೆಯಿರಿ: ರಾಜ್ಯದಲ್ಲಿ ಪ್ರತಿಯೊಬ್ಬ ಅರ್ಹರಿಗೆ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ 60 ವರ್ಷ ಹಾಗೂ ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಕೋವಿಡ್‌ ಮೊದಲ ಮತ್ತು 2ನೇ ಅಲೆಯ ಸಂದರ್ಭದಲ್ಲಿ ಯಾವ ಲಸಿಕೆಯನ್ನು (ಕೋವ್ಯಾಕ್ಸಿನ್‌ ಅಥವಾ ಕೋವಿಶೀಲ್ಡ್) ನೀಡಲಾಗಿತ್ತೋ ಅದೇ ಲಸಿಕೆ ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.

Advertisement

JN.1 ಬಹುಬೇಗ ಹರಡುತ್ತದೆ: ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್.1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬಾರದು. ಜನದಟ್ಟಣೆ ಮತ್ತಿತರ ಕಡೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್‌ ಧರಿಸುವುದು ಉತ್ತಮ. ಆದ್ರೆ ಕಡ್ಡಾಯವಾಗಿ ಮಾಸ್ಕ್‌ ಧರಿಸಲೇಬೇಕೆಂಬ ಆದೇಶ ಹೊರಡಿಸುವುದಿಲ್ಲ. ಹಾಗಂತ ಜನರು ಮೈ ಮರೆಬಾರದೆಂದು ಸಲಹೆ ನೀಡಿದರು.

ಇದೇ ವೇಳೆ ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು, ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಸಧ್ಯಕ್ಕೆ ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.

Advertisement

ಕೋವಿಡ್‍ನಿಂದ ಸಾವಾಗಿಲ್ಲ: ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದರು. ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ. ಅವರು ವಿವಿಧ ಆರೋಗ್ಯಸಮಸ್ಯೆಗಳಿಂದ ಬಳಲುತ್ತಿದ್ದರು. ಇವರ ಸಾವಿಗೂ ಕೋವಿಡ್‍ಗೂ ಸಂಬಂಧವೇ ಇಲ್ಲ. ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ-ಬೇರೆ ಆರೋಗ್ಯದ ಸಮಸ್ಯೆಗಳಿದ್ದವು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.

ಮುಖ್ಯಾಂಶಗಳು : ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಹಾಸಿಗೆಗಳನ್ನ ಮೀಸಲಿಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವೈದ್ಯಕೀಯ ಕಾಲೇಜಿನಲ್ಲಿ 18,141 ಹಾಸಿಗೆಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ 10 ಸಾವಿರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬರುವ ಆಸ್ಪತ್ರಗಳಲ್ಲಿ 11,500 ಹಾಸಿಗೆಗಳು ಲಭ್ಯವಿದೆ. ಕೇರಳದಲ್ಲಿ ಕಾಣಿಸಿಕೊಂಡ ರೂಪಾಂತರಿ ಜೆಎನ್-1 ಸೋಂಕು ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲೂ ಒಂದು ವೇಳೆ ಹಬ್ಬಿದರೆ ಏನೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದೆಲ್ಲವನ್ನೂ ತೆಗೆದುಕೊಂಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಅದರಂತೆ ಇಲಾಖೆಯಲ್ಲಿರುವ ಕೋವಿಡ್ ವಾರಿಯರ್ಸ್‌ ಫ್ಲೂಲಸಿಕೆಯನ್ನು ಪಡೆಯಬೇಕು.

Advertisement

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಸಾಮರ್ಥ್ಯವನ್ನೂ ಹೆಚ್ಚಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯಗಳ ಕಾರ್ಯ ಸಿದ್ಧತೆ ನಡೆಸಲಾಗಿದೆ.ಸಭೆಯಲ್ಲಿ 99 ಮೆಡಿಕಲ್ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರ ಜೊತೆ ಚರ್ಚೆ ನಡೆಸಲಾಗಿದೆ. ಎಲ್ಲಾ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. 30 ಸಾವಿರ ಲಸಿಕೆಗಳು ಲಭ್ಯವಿದ್ದು, ಈವರೆಗೂ ಲಸಿಕೆ ಪಡೆಯದೇ ಇದ್ದವರು, ಮುಂಜಾಗ್ರತಾ ಲಸಿಕೆಯನ್ನಾಗಿ ತೆಗೆದುಕೊಳ್ಳುವವರು ಈ ಸೌಲಭ್ಯ ಪಡೆದುಕೊಳ್ಳಬಹುದು.

– ಅಂತರ್ಜಾಲ ಮಾಹಿತಿ

Advertisement

Day by day, the threat of a new strain of Corona virus is increasing in the state. The number of infected is increasing. Medical Education Minister Dr. Sharanprakash Patil suggested that people should not be alarmed by the newly appeared covid mutant JN.1 (JN.1) infection and should take precautionary measures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

1 hour ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

2 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

4 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

4 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

10 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago