Advertisement
ಅನುಕ್ರಮ

10000 ಕಿಲೋಮೀಟರ್ ನಡಿಗೆಯ ನಂತರ….| ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…… | ಜ್ಞಾನ ಭಿಕ್ಷಾ ಪಾದಯಾತ್ರೆಯ ಪಕ್ಷಿನೋಟ…|

Share

10000 ಕಿಲೋಮೀಟರ್……..! ಕಾಲ್ನಡಿಗೆ..!. 

ರಾಷ್ಟ್ರದ ಮೊದಲ ಹೊಗೆ ಮುಕ್ತ ಗ್ರಾಮ ಎಂದು ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೈಚ್ಕೂರಳ್ಳಿಯಲ್ಲಿ ಕುಳಿತು ನೆನಪಿನ ಅಂಗಳಕ್ಕೆ ಜಿಗಿದಾಗ…..

ನಾನು ಡ್ಯಾನ್ಸ್ ಮಾಡುವವನಲ್ಲ, ಹಾಡು ಹೇಳುವವನಲ್ಲ, ಕಾಮಿಡಿ ಕಿಲಾಡಿಯಲ್ಲ, ಮಿಮಿಕ್ರಿ ಟಾಕೀಸಿನವನಲ್ಲ, ಯಾವುದೇ ಧರ್ಮದ ಧಾರ್ಮಿಕ ನಾಯಕನಲ್ಲ, ಪ್ರಶಸ್ತಿ ವಿಜೇತನಲ್ಲ, ಯಾವ ಅಧಿಕಾರವೂ ಇಲ್ಲ, ಯಾವ ಸಂಘಟನೆ ಅಥವಾ ಸಂಸ್ಥೆಗೂ ಸೇರಿಲ್ಲ……..

ಆದರೂ ಕರ್ನಾಟಕದ ಜನತೆ ಈ 336 ದಿನಗಳು 10 ಸಾವಿರ ಕಿಲೋಮೀಟರುಗಳ ಯಾತ್ರೆಯಲ್ಲಿ ತಮ್ಮ ಪ್ರೀತಿಯನ್ನು ಮೊಗೆ ಮೊಗೆದು ನೀಡಿದ್ದಾರೆ. ನನ್ನನ್ನು ಅಭಿಮಾನದಿಂದ ಸಾಕಿದ್ದಾರೆ. ಊಟ ವಸತಿ ಸೌಕರ್ಯಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡಿದ್ದಾರೆ.

ಕೇವಲ ಅಕ್ಷರಗಳಲ್ಲಿ ಮೂಡಿದ ಅಭಿಪ್ರಾಯಗಳನ್ನು ಓದಿ ವ್ಯವಸ್ಥೆಯ ಸುಧಾರಣೆಗೆ ಹಾತೊರೆಯುತ್ತಿರುವ ಮನಸ್ಸುಗಳೇ ಇದಕ್ಕೆಲ್ಲ ಬಹುಮುಖ್ಯ ಕಾರಣ.

ಚಳಿ ಬಿಸಿಲು ಮಳೆ ಗಾಳಿ ಎತ್ತರದಿಂದ ಇಳಿಜಾರು ಪ್ರದೇಶಗಳಲ್ಲಿ ಸಂಚರಿಸುತ್ತಾ, ಕೊರೊನಾ ಅಲೆಯ ನಡುವೆ ಸಾಗುತ್ತಾ ನಗದು ರಹಿತವಾಗಿ ಕಾಲ್ನಡಿಗೆ ಮುಂದುವರಿಯಲು ಜನರು ತೋರಿದ ಕಾಳಜಿಯೇ ಕಾರಣ.

ಪ್ರತಿ ಹೆಜ್ಜೆಯಲ್ಲೂ ಸಿಗುವ ಜನರೊಂದಿಗೆ ಸಂವಾದ ಮಾಡುತ್ತಾ, ಎಲ್ಲಾ ಸ್ತರಗಳ ಸಾರ್ವಜನಿಕರೊಂದಿಗೆ ಬೆರೆಯುತ್ತಾ ಮಾನವೀಯ ಮೌಲ್ಯಗಳ ಬಗ್ಗೆ ಒಂದು ಚರ್ಚೆ ಹುಟ್ಟುಹಾಕುತ್ತಾ ನಿರಂತರ ಪಯಣ ಸಾಗಲು ಕಾರಣವೇ ಬದಲಾವಣೆಯ ತುಡಿತದ ಮನಸ್ಸುಗಳು.

ಎಲ್ಲರಿಗೂ ತುಂಬು ಹೃದಯದಿಂದ ಕೃತಜ್ಞತೆಗಳನ್ನು ಅರ್ಪಿಸುತ್ತಾ……… ಇನ್ನೂ ಸಾಗುತ್ತಲೇ ಇದೆ….

ಮಾನವೀಯ ಮೌಲ್ಯಗಳ ಪುನರುತ್ಥಾನದ ” ಜ್ಞಾನ ಭಿಕ್ಷಾ ಪಾದಯಾತ್ರೆ “……

ನಿಜ ಮನುಷ್ಯರ ಹುಡುಕುತ್ತಾ….. ಸಮ ಸಮಾಜದ ಕನಸಿನಲ್ಲಿ…….. ಜೀವಪರ ನಿಲುವಿನೊಂದಿಗೆ…… ಪರಿಸರದ ಉಳಿವಿಗಾಗಿ…….  ಎಲ್ಲಾ ಭಾವನೆಗಳನ್ನು ಅನುಭವಿಸುತ್ತಾ….. ತಿನ್ನುವ ಅನ್ನ ಬೆಳೆಯುವ ರೈತರ ಋಣ ತೀರಿಸಲು….. ಎಲ್ಲರಲ್ಲೂ ಪ್ರೀತಿ ಎಂಬ ಭಾವವನ್ನು ಸ್ಥಾಯಿಯಾಗಿಸುವ ಆಸೆಯೊಂದಿಗೆ…… ಕಾಲ್ನಡಿಗೆಯೇ ಒಂದು ಸಾಧನೆಯಲ್ಲ, ಸಾಮಾಜಿಕ ಪರಿವರ್ತನೆಗೆ ಪಾದಯಾತ್ರೆ ಒಂದು ಮಾರ್ಗ ಅಷ್ಟೇ….. ಸಾಗುತ್ತಿದೆ ಪಯಣ ಕೊನೆಯ ಉಸಿರಿನವರೆಗೆ………..

ಇಲ್ಲಿಯವರೆಗಿನ ನಮ್ಮ ಜ್ಞಾನ ಭಿಕ್ಷಾ ಪಾದಯಾತ್ರೆಯ ಒಂದು ಪಕ್ಷಿನೋಟ……

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

3 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

7 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

19 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

20 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

20 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

21 hours ago