Advertisement
ಅನುಕ್ರಮ

10000 ಕಿಲೋಮೀಟರ್ ನಡಿಗೆಯ ನಂತರ….| ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…… | ಜ್ಞಾನ ಭಿಕ್ಷಾ ಪಾದಯಾತ್ರೆಯ ಪಕ್ಷಿನೋಟ…|

Share

10000 ಕಿಲೋಮೀಟರ್……..! ಕಾಲ್ನಡಿಗೆ..!. 

ರಾಷ್ಟ್ರದ ಮೊದಲ ಹೊಗೆ ಮುಕ್ತ ಗ್ರಾಮ ಎಂದು ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೈಚ್ಕೂರಳ್ಳಿಯಲ್ಲಿ ಕುಳಿತು ನೆನಪಿನ ಅಂಗಳಕ್ಕೆ ಜಿಗಿದಾಗ…..

ನಾನು ಡ್ಯಾನ್ಸ್ ಮಾಡುವವನಲ್ಲ, ಹಾಡು ಹೇಳುವವನಲ್ಲ, ಕಾಮಿಡಿ ಕಿಲಾಡಿಯಲ್ಲ, ಮಿಮಿಕ್ರಿ ಟಾಕೀಸಿನವನಲ್ಲ, ಯಾವುದೇ ಧರ್ಮದ ಧಾರ್ಮಿಕ ನಾಯಕನಲ್ಲ, ಪ್ರಶಸ್ತಿ ವಿಜೇತನಲ್ಲ, ಯಾವ ಅಧಿಕಾರವೂ ಇಲ್ಲ, ಯಾವ ಸಂಘಟನೆ ಅಥವಾ ಸಂಸ್ಥೆಗೂ ಸೇರಿಲ್ಲ……..

ಆದರೂ ಕರ್ನಾಟಕದ ಜನತೆ ಈ 336 ದಿನಗಳು 10 ಸಾವಿರ ಕಿಲೋಮೀಟರುಗಳ ಯಾತ್ರೆಯಲ್ಲಿ ತಮ್ಮ ಪ್ರೀತಿಯನ್ನು ಮೊಗೆ ಮೊಗೆದು ನೀಡಿದ್ದಾರೆ. ನನ್ನನ್ನು ಅಭಿಮಾನದಿಂದ ಸಾಕಿದ್ದಾರೆ. ಊಟ ವಸತಿ ಸೌಕರ್ಯಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡಿದ್ದಾರೆ.

ಕೇವಲ ಅಕ್ಷರಗಳಲ್ಲಿ ಮೂಡಿದ ಅಭಿಪ್ರಾಯಗಳನ್ನು ಓದಿ ವ್ಯವಸ್ಥೆಯ ಸುಧಾರಣೆಗೆ ಹಾತೊರೆಯುತ್ತಿರುವ ಮನಸ್ಸುಗಳೇ ಇದಕ್ಕೆಲ್ಲ ಬಹುಮುಖ್ಯ ಕಾರಣ.

ಚಳಿ ಬಿಸಿಲು ಮಳೆ ಗಾಳಿ ಎತ್ತರದಿಂದ ಇಳಿಜಾರು ಪ್ರದೇಶಗಳಲ್ಲಿ ಸಂಚರಿಸುತ್ತಾ, ಕೊರೊನಾ ಅಲೆಯ ನಡುವೆ ಸಾಗುತ್ತಾ ನಗದು ರಹಿತವಾಗಿ ಕಾಲ್ನಡಿಗೆ ಮುಂದುವರಿಯಲು ಜನರು ತೋರಿದ ಕಾಳಜಿಯೇ ಕಾರಣ.

ಪ್ರತಿ ಹೆಜ್ಜೆಯಲ್ಲೂ ಸಿಗುವ ಜನರೊಂದಿಗೆ ಸಂವಾದ ಮಾಡುತ್ತಾ, ಎಲ್ಲಾ ಸ್ತರಗಳ ಸಾರ್ವಜನಿಕರೊಂದಿಗೆ ಬೆರೆಯುತ್ತಾ ಮಾನವೀಯ ಮೌಲ್ಯಗಳ ಬಗ್ಗೆ ಒಂದು ಚರ್ಚೆ ಹುಟ್ಟುಹಾಕುತ್ತಾ ನಿರಂತರ ಪಯಣ ಸಾಗಲು ಕಾರಣವೇ ಬದಲಾವಣೆಯ ತುಡಿತದ ಮನಸ್ಸುಗಳು.

ಎಲ್ಲರಿಗೂ ತುಂಬು ಹೃದಯದಿಂದ ಕೃತಜ್ಞತೆಗಳನ್ನು ಅರ್ಪಿಸುತ್ತಾ……… ಇನ್ನೂ ಸಾಗುತ್ತಲೇ ಇದೆ….

ಮಾನವೀಯ ಮೌಲ್ಯಗಳ ಪುನರುತ್ಥಾನದ ” ಜ್ಞಾನ ಭಿಕ್ಷಾ ಪಾದಯಾತ್ರೆ “……

ನಿಜ ಮನುಷ್ಯರ ಹುಡುಕುತ್ತಾ….. ಸಮ ಸಮಾಜದ ಕನಸಿನಲ್ಲಿ…….. ಜೀವಪರ ನಿಲುವಿನೊಂದಿಗೆ…… ಪರಿಸರದ ಉಳಿವಿಗಾಗಿ…….  ಎಲ್ಲಾ ಭಾವನೆಗಳನ್ನು ಅನುಭವಿಸುತ್ತಾ….. ತಿನ್ನುವ ಅನ್ನ ಬೆಳೆಯುವ ರೈತರ ಋಣ ತೀರಿಸಲು….. ಎಲ್ಲರಲ್ಲೂ ಪ್ರೀತಿ ಎಂಬ ಭಾವವನ್ನು ಸ್ಥಾಯಿಯಾಗಿಸುವ ಆಸೆಯೊಂದಿಗೆ…… ಕಾಲ್ನಡಿಗೆಯೇ ಒಂದು ಸಾಧನೆಯಲ್ಲ, ಸಾಮಾಜಿಕ ಪರಿವರ್ತನೆಗೆ ಪಾದಯಾತ್ರೆ ಒಂದು ಮಾರ್ಗ ಅಷ್ಟೇ….. ಸಾಗುತ್ತಿದೆ ಪಯಣ ಕೊನೆಯ ಉಸಿರಿನವರೆಗೆ………..

ಇಲ್ಲಿಯವರೆಗಿನ ನಮ್ಮ ಜ್ಞಾನ ಭಿಕ್ಷಾ ಪಾದಯಾತ್ರೆಯ ಒಂದು ಪಕ್ಷಿನೋಟ……

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago