Advertisement
ಅನುಕ್ರಮ

10000 ಕಿಲೋಮೀಟರ್ ನಡಿಗೆಯ ನಂತರ….| ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…… | ಜ್ಞಾನ ಭಿಕ್ಷಾ ಪಾದಯಾತ್ರೆಯ ಪಕ್ಷಿನೋಟ…|

Share

10000 ಕಿಲೋಮೀಟರ್……..! ಕಾಲ್ನಡಿಗೆ..!. 

ರಾಷ್ಟ್ರದ ಮೊದಲ ಹೊಗೆ ಮುಕ್ತ ಗ್ರಾಮ ಎಂದು ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೈಚ್ಕೂರಳ್ಳಿಯಲ್ಲಿ ಕುಳಿತು ನೆನಪಿನ ಅಂಗಳಕ್ಕೆ ಜಿಗಿದಾಗ…..

ನಾನು ಡ್ಯಾನ್ಸ್ ಮಾಡುವವನಲ್ಲ, ಹಾಡು ಹೇಳುವವನಲ್ಲ, ಕಾಮಿಡಿ ಕಿಲಾಡಿಯಲ್ಲ, ಮಿಮಿಕ್ರಿ ಟಾಕೀಸಿನವನಲ್ಲ, ಯಾವುದೇ ಧರ್ಮದ ಧಾರ್ಮಿಕ ನಾಯಕನಲ್ಲ, ಪ್ರಶಸ್ತಿ ವಿಜೇತನಲ್ಲ, ಯಾವ ಅಧಿಕಾರವೂ ಇಲ್ಲ, ಯಾವ ಸಂಘಟನೆ ಅಥವಾ ಸಂಸ್ಥೆಗೂ ಸೇರಿಲ್ಲ……..

ಆದರೂ ಕರ್ನಾಟಕದ ಜನತೆ ಈ 336 ದಿನಗಳು 10 ಸಾವಿರ ಕಿಲೋಮೀಟರುಗಳ ಯಾತ್ರೆಯಲ್ಲಿ ತಮ್ಮ ಪ್ರೀತಿಯನ್ನು ಮೊಗೆ ಮೊಗೆದು ನೀಡಿದ್ದಾರೆ. ನನ್ನನ್ನು ಅಭಿಮಾನದಿಂದ ಸಾಕಿದ್ದಾರೆ. ಊಟ ವಸತಿ ಸೌಕರ್ಯಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡಿದ್ದಾರೆ.

ಕೇವಲ ಅಕ್ಷರಗಳಲ್ಲಿ ಮೂಡಿದ ಅಭಿಪ್ರಾಯಗಳನ್ನು ಓದಿ ವ್ಯವಸ್ಥೆಯ ಸುಧಾರಣೆಗೆ ಹಾತೊರೆಯುತ್ತಿರುವ ಮನಸ್ಸುಗಳೇ ಇದಕ್ಕೆಲ್ಲ ಬಹುಮುಖ್ಯ ಕಾರಣ.

ಚಳಿ ಬಿಸಿಲು ಮಳೆ ಗಾಳಿ ಎತ್ತರದಿಂದ ಇಳಿಜಾರು ಪ್ರದೇಶಗಳಲ್ಲಿ ಸಂಚರಿಸುತ್ತಾ, ಕೊರೊನಾ ಅಲೆಯ ನಡುವೆ ಸಾಗುತ್ತಾ ನಗದು ರಹಿತವಾಗಿ ಕಾಲ್ನಡಿಗೆ ಮುಂದುವರಿಯಲು ಜನರು ತೋರಿದ ಕಾಳಜಿಯೇ ಕಾರಣ.

ಪ್ರತಿ ಹೆಜ್ಜೆಯಲ್ಲೂ ಸಿಗುವ ಜನರೊಂದಿಗೆ ಸಂವಾದ ಮಾಡುತ್ತಾ, ಎಲ್ಲಾ ಸ್ತರಗಳ ಸಾರ್ವಜನಿಕರೊಂದಿಗೆ ಬೆರೆಯುತ್ತಾ ಮಾನವೀಯ ಮೌಲ್ಯಗಳ ಬಗ್ಗೆ ಒಂದು ಚರ್ಚೆ ಹುಟ್ಟುಹಾಕುತ್ತಾ ನಿರಂತರ ಪಯಣ ಸಾಗಲು ಕಾರಣವೇ ಬದಲಾವಣೆಯ ತುಡಿತದ ಮನಸ್ಸುಗಳು.

ಎಲ್ಲರಿಗೂ ತುಂಬು ಹೃದಯದಿಂದ ಕೃತಜ್ಞತೆಗಳನ್ನು ಅರ್ಪಿಸುತ್ತಾ……… ಇನ್ನೂ ಸಾಗುತ್ತಲೇ ಇದೆ….

ಮಾನವೀಯ ಮೌಲ್ಯಗಳ ಪುನರುತ್ಥಾನದ ” ಜ್ಞಾನ ಭಿಕ್ಷಾ ಪಾದಯಾತ್ರೆ “……

ನಿಜ ಮನುಷ್ಯರ ಹುಡುಕುತ್ತಾ….. ಸಮ ಸಮಾಜದ ಕನಸಿನಲ್ಲಿ…….. ಜೀವಪರ ನಿಲುವಿನೊಂದಿಗೆ…… ಪರಿಸರದ ಉಳಿವಿಗಾಗಿ…….  ಎಲ್ಲಾ ಭಾವನೆಗಳನ್ನು ಅನುಭವಿಸುತ್ತಾ….. ತಿನ್ನುವ ಅನ್ನ ಬೆಳೆಯುವ ರೈತರ ಋಣ ತೀರಿಸಲು….. ಎಲ್ಲರಲ್ಲೂ ಪ್ರೀತಿ ಎಂಬ ಭಾವವನ್ನು ಸ್ಥಾಯಿಯಾಗಿಸುವ ಆಸೆಯೊಂದಿಗೆ…… ಕಾಲ್ನಡಿಗೆಯೇ ಒಂದು ಸಾಧನೆಯಲ್ಲ, ಸಾಮಾಜಿಕ ಪರಿವರ್ತನೆಗೆ ಪಾದಯಾತ್ರೆ ಒಂದು ಮಾರ್ಗ ಅಷ್ಟೇ….. ಸಾಗುತ್ತಿದೆ ಪಯಣ ಕೊನೆಯ ಉಸಿರಿನವರೆಗೆ………..

ಇಲ್ಲಿಯವರೆಗಿನ ನಮ್ಮ ಜ್ಞಾನ ಭಿಕ್ಷಾ ಪಾದಯಾತ್ರೆಯ ಒಂದು ಪಕ್ಷಿನೋಟ……

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

5 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

6 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

11 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

13 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

13 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

15 hours ago