ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

April 26, 2025
9:12 PM

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ ಆವರಣದಲ್ಲಿ ನಡೆದ ಉದ್ಯೋಗ ನಿಯುಕ್ತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.  ಈ ಸಂದರ್ಭದಲ್ಲಿ ಕೇಂದ್ರ ಸಚಿವ ಸಚಿವ ಡಾ. ವೀರೇಂದ್ರ ಕುಮಾರ್ ಅವರು ಇತ್ತೀಚಿಗೆ ಆಯ್ಕೆಯಾಗಿರುವ ನೂತನ 25 ಉದ್ಯೋಗಿಗಳಿಗೆ ಉದ್ಯೋಗ ನಿಯುಕ್ತಿ ಪತ್ರ ವಿತರಣೆ ಮಾಡಿದರು.

Advertisement
Advertisement

2047  ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು  ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ನಿಖಿಲ್ ಖಡ್ಸೆ ಹೇಳಿದ್ದಾರೆ. ಹುಬ್ಬಳ್ಳಿಯ  ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ದೇಶಪಾಂಡೆ ಫೌಂಡೇಷನ್ ಸಭಾಂಗಣದಲ್ಲಿ  ಏರ್ಪಡಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ  ನೇಮಕಾತಿ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ‘ಉದ್ಯೋಗ ಪಡೆದ ಯುವಕರು ಆತ್ಮನಿರ್ಭರ ಯೋಜನೆ ಸಾಕಾರಕ್ಕೆ ಶ್ರಮಿಸಬೇಕು ಎಂದು ತಿಳಿಸಿದ್ದಾರೆ. ‘ದೇಶವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಯುವಕರ ಮೇಲಿದೆ.  ಪ್ರತಿ ವರ್ಷ ಎರಡು ಬಾರಿ ಉದ್ಯೋಗ ಮೇಳ ಆಯೋಜಿಸಿ ನೇಮಕಾತಿ ಪತ್ರ ನೀಡುತ್ತಿದ್ದು, ಯುಕವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್
January 30, 2026
10:42 PM
by: ಮಹೇಶ್ ಪುಚ್ಚಪ್ಪಾಡಿ
ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror