Advertisement
ಸುದ್ದಿಗಳು

ಗ್ರಾಮ ಒನ್ ಕೇಂದ್ರ | ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Share

ದ ಕ ಜಿಲ್ಲೆಯಲ್ಲಿ ಒಟ್ಟು 223 ಗ್ರಾಮ ಪಂಚಾಯತ್ ಗಳಿಗೆ 304 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು, ಈ ಪೈಕಿ 230 ಕೇಂದ್ರಗಳನ್ನು ತೆರೆಯಲಾಗಿದೆ. ಬಾಕಿ ಇರುವ 74 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಖಾಲಿ ಇರುವ ಗ್ರಾಮ ಪಂಚಾಯತ್‍ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.‌

ಅರ್ಹತೆಗಳು: ಫ್ರಾಂಚೈಸಿ ಅರ್ಜಿದಾರರು ಡಿಪ್ಲೋಮಾ, ಐ.ಟಿ.ಐ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ವಿಭಾಗದಲ್ಲಿ ಪರಿಣತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿದಾರರು ಸ್ವಂತ ಅಥವಾ ಬಾಡಿಗೆ ಕಟ್ಟಡ ಹೊಂದಿರಬೇಕು ಅಥವಾ ಟೈಲ್ಸ್ ಗ್ರಾನೈಟ್ ಫ್ಲೋರಿಂಗ್, ಆರ್.ಸಿ.ಸಿ ಛಾವಣಿ ಇತ್ಯಾದಿ ಯಾವುದೇ ನೀರು ಸೋರಿಕೆಯಾಗದ ಕಟ್ಟಡಗಳಲ್ಲಿ ಗ್ರಾಮಒನ್ ಕೇಂದ್ರಗಳನ್ನು ಸ್ಥಾಪಿಸಲು ತಯಾರಾಗಿರಬೇಕು.

ಆಧಾರ್ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರು ಹಾಗೂ ಅದೇ ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಂತೆಯೇ ಮಹಿಳೆಯರಿಗೆ, ವಿಕಲಚೇತನರಿಗೆ ಹಾಗೂ ತೃತೀಯ ಲಿಂಗಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಆಸಕ್ತರು  ಆನ್‍ಲೈನ್ ನಲ್ಲಿ ಇದೇ ಡಿಸೆಂಬರ್ 24ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ:080-69008800 ಅನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

1 hour ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

1 hour ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

1 hour ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

2 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

11 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

14 hours ago