ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

November 17, 2023
8:43 PM

ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿಯಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿ, ನೆಹರು ಮೈದಾನ ಎದುರು ಮಂಗಳೂರು ಇಲ್ಲಿಗೆ ತಮ್ಮ ವಿವರಗಳನ್ನು ನವೆಂಬರ್ 29ರೊಳಗೆ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ತಾಲೂಕು ತಾಂತ್ರಿಕ ವ್ಯವಸ್ಥಾಪಕರು, ಎಂ.ಎಸ್ಸಿ ಕೃಷಿ ಅಥವಾ ಇತರೆ ಕೃಷಿ ಸ್ನಾತಕೋತರ ಪದವಿ ಅಥವಾ ಪದವಿಯನ್ನು ಸರ್ಕಾರಿ ಅನುದಾನಿತ ವಿಶ್ವವಿದ್ಯಾನಿಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ 2 ವರ್ಷಗಳ ಅನುಭವ ಕಡ್ಡಾಯವಾಗಿರುತ್ತದೆ.

ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-ಬಿ.ಎಸ್ಸಿ ಕೃಷಿ ಅಥವಾ ಕೃಷಿ ಎಂ.ಎಸ್ಸಿ ಕೃಷಿ ಅಥವಾ ಇತರೆ ಕೃಷಿ ಸ್ನಾತಕೋತರ ಪದವಿ ಅಥವಾ ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾನಿಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ 1 ವರ್ಷದ ಅನುಭವ ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2423604 ಸಂಪರ್ಕಿಸುವಂತೆ ಯೋಜನೆ ನಿರ್ದೇಶಕರು ಆತ್ಮ ಯೋಜನೆ ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror