ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿಯಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿ, ನೆಹರು ಮೈದಾನ ಎದುರು ಮಂಗಳೂರು ಇಲ್ಲಿಗೆ ತಮ್ಮ ವಿವರಗಳನ್ನು ನವೆಂಬರ್ 29ರೊಳಗೆ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ: ತಾಲೂಕು ತಾಂತ್ರಿಕ ವ್ಯವಸ್ಥಾಪಕರು, ಎಂ.ಎಸ್ಸಿ ಕೃಷಿ ಅಥವಾ ಇತರೆ ಕೃಷಿ ಸ್ನಾತಕೋತರ ಪದವಿ ಅಥವಾ ಪದವಿಯನ್ನು ಸರ್ಕಾರಿ ಅನುದಾನಿತ ವಿಶ್ವವಿದ್ಯಾನಿಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ 2 ವರ್ಷಗಳ ಅನುಭವ ಕಡ್ಡಾಯವಾಗಿರುತ್ತದೆ.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-ಬಿ.ಎಸ್ಸಿ ಕೃಷಿ ಅಥವಾ ಕೃಷಿ ಎಂ.ಎಸ್ಸಿ ಕೃಷಿ ಅಥವಾ ಇತರೆ ಕೃಷಿ ಸ್ನಾತಕೋತರ ಪದವಿ ಅಥವಾ ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾನಿಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ 1 ವರ್ಷದ ಅನುಭವ ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2423604 ಸಂಪರ್ಕಿಸುವಂತೆ ಯೋಜನೆ ನಿರ್ದೇಶಕರು ಆತ್ಮ ಯೋಜನೆ ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…
ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…
ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?
ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…