ರಾಜ್ಯದ ವಿವಿಧ ನ್ಯಾಯಾಲಯದಲ್ಲಿ ಖಾಲಿಯಿರುವ ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

September 23, 2022
6:13 PM

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ರಾಜ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 21 ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸಲು ಬಯಸುವವರು ಕಾನೂನು ಪ್ರಕಾರ ಸ್ಥಾಪನೆಯಾಗಿರುವ ಯಾವುದೇ ಕಾಲೇಜಿನಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್ ಸೇರಿದಂತೆ ಯಾವುದೇ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ವಕೀಲಿ ವೃತ್ತಿ ಮಾಡಿರಬೇಕು.  ವಯೋಮಿತಿಯು ಸಾಮಾನ್ಯ ವರ್ಗಕ್ಕೆ 45, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 48 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.

ಇನ್ನೂ ಪೂರ್ವಭಾವಿ ಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 500 ರೂ., ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ 250 ರೂ., ಮುಖ್ಯಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 1,000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 750 ರೂ. ಇರಲಿದೆ. ಆದರೆ, ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟವಾದ 15 ದಿನದಲ್ಲಿ ಮುಖ್ಯಪರೀಕ್ಷೆಗೆ ಶುಲ್ಕ ಪಾವತಿ ಮಾಡಬೇಕು. ವಿಳಂಬವಾದಲ್ಲಿ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್ ಮಂಡಳಿಯಿಂದ ವಿವಿಧ ಹುದ್ದೆ : ಅರ್ಜಿ ಆಹ್ವಾನ
November 30, 2025
3:46 PM
by: ದ ರೂರಲ್ ಮಿರರ್.ಕಾಂ
ಮೈಸೂರಿನಲ್ಲಿ ಅ.17 ರಿಂದ ಉದ್ಯೋಗ ಮೇಳ
October 15, 2025
7:04 AM
by: The Rural Mirror ಸುದ್ದಿಜಾಲ
ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಗುರಿಗಿಂತಲೂ ಹೆಚ್ಚಿನ ಹೂಡಿಕೆ | ಸುಮಾರು 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ
October 3, 2025
3:04 PM
by: The Rural Mirror ಸುದ್ದಿಜಾಲ
ಕೆ.ಎಸ್.ಆರ್.ಟಿ.ಸಿ ಅಪ್ರೆಂಟಿಸ್ ತರಬೇತಿ : ಅರ್ಜಿ ಆಹ್ವಾನ
August 5, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror