ರಾಜ್ಯದ ವಿವಿಧ ನ್ಯಾಯಾಲಯದಲ್ಲಿ ಖಾಲಿಯಿರುವ ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

September 23, 2022
6:13 PM

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ರಾಜ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 21 ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸಲು ಬಯಸುವವರು ಕಾನೂನು ಪ್ರಕಾರ ಸ್ಥಾಪನೆಯಾಗಿರುವ ಯಾವುದೇ ಕಾಲೇಜಿನಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್ ಸೇರಿದಂತೆ ಯಾವುದೇ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ವಕೀಲಿ ವೃತ್ತಿ ಮಾಡಿರಬೇಕು.  ವಯೋಮಿತಿಯು ಸಾಮಾನ್ಯ ವರ್ಗಕ್ಕೆ 45, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 48 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.

ಇನ್ನೂ ಪೂರ್ವಭಾವಿ ಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 500 ರೂ., ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ 250 ರೂ., ಮುಖ್ಯಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 1,000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 750 ರೂ. ಇರಲಿದೆ. ಆದರೆ, ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟವಾದ 15 ದಿನದಲ್ಲಿ ಮುಖ್ಯಪರೀಕ್ಷೆಗೆ ಶುಲ್ಕ ಪಾವತಿ ಮಾಡಬೇಕು. ವಿಳಂಬವಾದಲ್ಲಿ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror