ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ರಾಜ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 21 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಕಾನೂನು ಪ್ರಕಾರ ಸ್ಥಾಪನೆಯಾಗಿರುವ ಯಾವುದೇ ಕಾಲೇಜಿನಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್ ಸೇರಿದಂತೆ ಯಾವುದೇ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ವಕೀಲಿ ವೃತ್ತಿ ಮಾಡಿರಬೇಕು. ವಯೋಮಿತಿಯು ಸಾಮಾನ್ಯ ವರ್ಗಕ್ಕೆ 45, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 48 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.
ಇನ್ನೂ ಪೂರ್ವಭಾವಿ ಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 500 ರೂ., ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ 250 ರೂ., ಮುಖ್ಯಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 1,000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 750 ರೂ. ಇರಲಿದೆ. ಆದರೆ, ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟವಾದ 15 ದಿನದಲ್ಲಿ ಮುಖ್ಯಪರೀಕ್ಷೆಗೆ ಶುಲ್ಕ ಪಾವತಿ ಮಾಡಬೇಕು. ವಿಳಂಬವಾದಲ್ಲಿ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…