ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ರಾಜ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 21 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಕಾನೂನು ಪ್ರಕಾರ ಸ್ಥಾಪನೆಯಾಗಿರುವ ಯಾವುದೇ ಕಾಲೇಜಿನಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್ ಸೇರಿದಂತೆ ಯಾವುದೇ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ವಕೀಲಿ ವೃತ್ತಿ ಮಾಡಿರಬೇಕು. ವಯೋಮಿತಿಯು ಸಾಮಾನ್ಯ ವರ್ಗಕ್ಕೆ 45, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 48 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.
ಇನ್ನೂ ಪೂರ್ವಭಾವಿ ಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 500 ರೂ., ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ 250 ರೂ., ಮುಖ್ಯಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 1,000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 750 ರೂ. ಇರಲಿದೆ. ಆದರೆ, ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟವಾದ 15 ದಿನದಲ್ಲಿ ಮುಖ್ಯಪರೀಕ್ಷೆಗೆ ಶುಲ್ಕ ಪಾವತಿ ಮಾಡಬೇಕು. ವಿಳಂಬವಾದಲ್ಲಿ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…