ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ರಾಜ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 21 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಕಾನೂನು ಪ್ರಕಾರ ಸ್ಥಾಪನೆಯಾಗಿರುವ ಯಾವುದೇ ಕಾಲೇಜಿನಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್ ಸೇರಿದಂತೆ ಯಾವುದೇ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ವಕೀಲಿ ವೃತ್ತಿ ಮಾಡಿರಬೇಕು. ವಯೋಮಿತಿಯು ಸಾಮಾನ್ಯ ವರ್ಗಕ್ಕೆ 45, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 48 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.
ಇನ್ನೂ ಪೂರ್ವಭಾವಿ ಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 500 ರೂ., ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ 250 ರೂ., ಮುಖ್ಯಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 1,000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 750 ರೂ. ಇರಲಿದೆ. ಆದರೆ, ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟವಾದ 15 ದಿನದಲ್ಲಿ ಮುಖ್ಯಪರೀಕ್ಷೆಗೆ ಶುಲ್ಕ ಪಾವತಿ ಮಾಡಬೇಕು. ವಿಳಂಬವಾದಲ್ಲಿ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…