ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ರಾಜ್ಯ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 21 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಕಾನೂನು ಪ್ರಕಾರ ಸ್ಥಾಪನೆಯಾಗಿರುವ ಯಾವುದೇ ಕಾಲೇಜಿನಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್ ಸೇರಿದಂತೆ ಯಾವುದೇ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ವಕೀಲಿ ವೃತ್ತಿ ಮಾಡಿರಬೇಕು. ವಯೋಮಿತಿಯು ಸಾಮಾನ್ಯ ವರ್ಗಕ್ಕೆ 45, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 48 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.
ಇನ್ನೂ ಪೂರ್ವಭಾವಿ ಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 500 ರೂ., ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ 250 ರೂ., ಮುಖ್ಯಪರೀಕ್ಷೆಗೆ ಸಾಮಾನ್ಯ ವರ್ಗಕ್ಕೆ 1,000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 750 ರೂ. ಇರಲಿದೆ. ಆದರೆ, ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟವಾದ 15 ದಿನದಲ್ಲಿ ಮುಖ್ಯಪರೀಕ್ಷೆಗೆ ಶುಲ್ಕ ಪಾವತಿ ಮಾಡಬೇಕು. ವಿಳಂಬವಾದಲ್ಲಿ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…