ಮಂಗಳೂರು | ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

December 12, 2023
8:19 PM
ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ.

ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿನಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಖಾಲಿಯಿದ್ದು ಈ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆ ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಂಗಳೂರು ಇಲ್ಲಿ ತಮ್ಮ ಬಯೋಡಾಟವನ್ನು 2024 ರ ಜನವರಿ 6 ರೊಳಗೆ ಸಲ್ಲಿಸಬೇಕು.

Advertisement

ವಿದ್ಯಾರ್ಹತೆ: 
1. ತಾಲೂಕು ತಾಂತ್ರಿಕ ವ್ಯವಸ್ಥಾಪಕರು- ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯವಾಗಿರುತ್ತದೆ.

2. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು- ಬಿ.ಎಸ್ಸಿ ಕೃಷಿ/ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಒಂದು ವರ್ಷದ ಅನುಭವ ಕಡ್ಡಾಯವಾಗಿರುತ್ತದೆ.

Advertisement

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಈ ದೂರವಾಣಿ ಸಂಖ್ಯೆ: 0824-2423604ಗೆ ಸಂಪರ್ಕಿಸುವಂತೆ ಯೋಜನಾ ನಿರ್ದೇಶಕರು ಆತ್ಮ ಯೋಜನೆ ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror