Advertisement
ಮಾಹಿತಿ

ಮಂಗಳೂರು | ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Share

ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿನಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಖಾಲಿಯಿದ್ದು ಈ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆ ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಂಗಳೂರು ಇಲ್ಲಿ ತಮ್ಮ ಬಯೋಡಾಟವನ್ನು 2024 ರ ಜನವರಿ 6 ರೊಳಗೆ ಸಲ್ಲಿಸಬೇಕು.

ವಿದ್ಯಾರ್ಹತೆ: 
1. ತಾಲೂಕು ತಾಂತ್ರಿಕ ವ್ಯವಸ್ಥಾಪಕರು- ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯವಾಗಿರುತ್ತದೆ.

2. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು- ಬಿ.ಎಸ್ಸಿ ಕೃಷಿ/ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಒಂದು ವರ್ಷದ ಅನುಭವ ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಈ ದೂರವಾಣಿ ಸಂಖ್ಯೆ: 0824-2423604ಗೆ ಸಂಪರ್ಕಿಸುವಂತೆ ಯೋಜನಾ ನಿರ್ದೇಶಕರು ಆತ್ಮ ಯೋಜನೆ ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

4 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

9 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

11 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

18 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago