ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿನಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಖಾಲಿಯಿದ್ದು ಈ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆ ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಂಗಳೂರು ಇಲ್ಲಿ ತಮ್ಮ ಬಯೋಡಾಟವನ್ನು 2024 ರ ಜನವರಿ 6 ರೊಳಗೆ ಸಲ್ಲಿಸಬೇಕು.
ವಿದ್ಯಾರ್ಹತೆ:
1. ತಾಲೂಕು ತಾಂತ್ರಿಕ ವ್ಯವಸ್ಥಾಪಕರು- ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯವಾಗಿರುತ್ತದೆ.
2. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು- ಬಿ.ಎಸ್ಸಿ ಕೃಷಿ/ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಒಂದು ವರ್ಷದ ಅನುಭವ ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಈ ದೂರವಾಣಿ ಸಂಖ್ಯೆ: 0824-2423604ಗೆ ಸಂಪರ್ಕಿಸುವಂತೆ ಯೋಜನಾ ನಿರ್ದೇಶಕರು ಆತ್ಮ ಯೋಜನೆ ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…