ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿನಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಖಾಲಿಯಿದ್ದು ಈ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆ ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಂಗಳೂರು ಇಲ್ಲಿ ತಮ್ಮ ಬಯೋಡಾಟವನ್ನು 2024 ರ ಜನವರಿ 6 ರೊಳಗೆ ಸಲ್ಲಿಸಬೇಕು.
ವಿದ್ಯಾರ್ಹತೆ:
1. ತಾಲೂಕು ತಾಂತ್ರಿಕ ವ್ಯವಸ್ಥಾಪಕರು- ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯವಾಗಿರುತ್ತದೆ.
2. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು- ಬಿ.ಎಸ್ಸಿ ಕೃಷಿ/ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಒಂದು ವರ್ಷದ ಅನುಭವ ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಈ ದೂರವಾಣಿ ಸಂಖ್ಯೆ: 0824-2423604ಗೆ ಸಂಪರ್ಕಿಸುವಂತೆ ಯೋಜನಾ ನಿರ್ದೇಶಕರು ಆತ್ಮ ಯೋಜನೆ ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…