ಹಿರಿಯ ಪತ್ರಕರ್ತ ಬಿ ಟಿ ರಂಜನ್ ಶನಿವಾರ ಮುಂಜಾನೆ ನಿಧನರಾದರು. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ಅವರು ದಾಖಲಾಗಿದ್ದರು.
30 ವರ್ಷಗಳಿಂದಲೂ ಹೆಚ್ಚು ಕಾಲ ಕನ್ನಡ ಪತ್ರಿಕಾರಂಗದಲ್ಲಿ ಕೆಲಸ ಮಾಡುತ್ತಿದ್ದ ಬಿ ಟಿ ರಂಜನ್ ಅವರು ಮುಂಗಾರು ಪತ್ರಿಕೆಯಿಂದ ವೃತ್ತಿಜೀವನ ಆರಂಭಿಸಿದ್ದರು. ಹೊಸದಿಗಂತ ಸೇರಿದಂತೆ ಉದಯವಾಣಿ ಪತ್ರಿಕೆಯಲ್ಲಿ ಕೆಲಸ ಮಾಡಿ ಕಳೆದ ಮೂರು ವರ್ಷಗಳಿಂದ ಹೊಸದಿಗಂತ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಪುತ್ತೂರು ತಾಲೂಕು ಪತ್ರಕರ್ತ ಸಂಘದ ಸ್ಥಾಪಕಾಧ್ಯಕ್ಷರಾಗಿ ಸಂಘವನ್ನು ಕಟ್ಟಿ ಬೆಳೆಸಿದ ಬಿ ಟಿ ರಂಜನ್ ಅವರು ಸಮಾಜದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಗಳನ್ನು ನೀಡಿದ್ದರು. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…