Advertisement
ಸುದ್ದಿಗಳು

ಇಂದು ಸಿಎಂ ಬೊಮ್ಮಾಯಿ ನಾಮಪತ್ರ: ನಡ್ಡಾ, ಸುದೀಪ್‌ ರೋಡ್‌ ಶೋ : ಹರಿದು ಬಂದ ಜನಸಾಗರ

Share

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಸುದೀಪ್‌ ಸೇರಿ 10ಕ್ಕೂ ಹೆಚ್ಚು ಸಚಿವರು ಭಾಗವಹಿಸಿದ್ದರು. ಇದು ಶಿಗ್ಗಾಂವಿ, ಹಾವೇರಿಯಷ್ಟೇ ಅಲ್ಲದೆ ಉತ್ತರ ಕರ್ನಾಟಕ ಭಾಗದ ಕಮಲ ಪಡೆಯಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ನಿರೀಕ್ಷೆಯಿದೆ. ಶಿಗ್ಗಾಂವಿ ಕ್ಷೇತ್ರದಿಂದ ಬೊಮ್ಮಾಯಿ 4ನೇ ಬಾರಿಗೆ ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ. ಏ.15ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದ ಅವರು ಬುಧವಾರ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.

ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಮಾತ್ರ ಬಾಕಿಯಿದ್ದು, ಇಂದು ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ, ಭರ್ಜರಿ ರೋಡ್ ಶೋ ಮೂಲಕವಾಗಿ ಸಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದಕ್ಕೂ ಮುನ್ನ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಬೃಹತ್ ರೋಡ್ ಶೋ, ಸಮಾವೇಶ್ ನಡೆಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಕಿಚ್ಚ ಸುದೀಪ್ ಭಾಗವಹಿಸಿದ್ದರು.

ರೋಡ್ ಶೋ, ಸಮಾವೇಶದ ಬಳಿಕ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಿಂ ಬಸವರಾಜ್ ಬೊಮ್ಮಾಯಿ, ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕಿಚ್ಚ ಸುದೀಪ್ ಸಾಥ್ ನೀಡಿದರು.

ಸಲ್ಲಿಕೆಗೆ ಇನ್ನೆರಡು ದಿನಗಳಷ್ಟೇ ಬಾಕಿಯಿದ್ದು, ಮಂಗಳವಾರ ರಾತ್ರಿ ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಫೈನಲ್‌ ಮಾಡಿದೆ. ಮಹಮ್ಮದ್‌ ಸವಣೂರ್‌ಗೆ ಟಿಕೆಟ್‌ ಘೋಷಿಸಿದೆ. ಇತ್ತ ಮುಖ್ಯಮಂತ್ರಿ ಬೊಮ್ಮಾಯಿ ಕ್ಷೇತ್ರದಲ್ಲಿ ಬಿಜೆಪಿ ಬಿರುಗಾಳಿ ಎಬ್ಬಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೆ ಆಗಮಿಸುತ್ತಿರುವುದು ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಳಿಸಿದೆ. ಅಲ್ಲದೆ ನಟ ಕಿಚ್ಚ ಸುದೀಪ್‌ ಪಾಲ್ಗೊಳ್ಳುತ್ತಿರುವುದು ವಿಶೇಷ.

ಸಿಎಂ ಪರ ಕಿಚ್ಚ ಸುದೀಪ್‌ ಪ್ರಚಾರ: ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್‌ ಈ ಹಿಂದೆಯೇ ಘೋಷಣೆ ಮಾಡಿದ್ದರೂ ಈವರೆಗೆ ಎಲ್ಲೂ ಪ್ರಚಾರಕ್ಕೆ ಆಗಮಿಸಿರಲಿಲ್ಲ. ಮುಖ್ಯಮಂತ್ರಿ ತವರು ಕ್ಷೇತ್ರದಿಂದಲೇ ಸುದೀಪ್‌ ಪ್ರಚಾರ ಆರಂಭಗೊಳ್ಳುತ್ತಿರುವುದು ವಿಶೇಷ. ರೋಡ್‌ ಶೋದಲ್ಲಿ ಹತ್ತಾರು ಸಾವಿರ ಜನ ಪಾಲ್ಗೊಗೊಂಡಿದ್ದು, ಇಡೀ ಶಿಗ್ಗಾಂವಿ ಪಟ್ಟಣ ಕೇಸರಿಮಯವಾಗಿತ್ತು. ನೆಚ್ಚಿನ ನಟನನ್ನು ನೋಡುವ ಕಾತರದಲ್ಲಿ ಯುವ ಪಡೆಯಿದೆ. ಶಿಗ್ಗಾಂವಿ ಅಖಾಡದಲ್ಲಿ ಕುಸ್ತಿಗೆ ರೆಡಿಯಾಗಿರುವ ಬೊಮ್ಮಾಯಿ ಆರಂಭದಲ್ಲೇ ಶಕ್ತಿ ಪ್ರದರ್ಶನದ ಮೂಲಕ ವಿಪಕ್ಷಗಳಿಗೆ ಎಚ್ಚರಿಕೆ ಸಂದೇಶ ನೀಡಲು ಹೊರಟಿದ್ದಾರೆ.

ಸ್ವತಃ ಸಿಎಂ ಕೂಡ ತಾವು ನಾಮಪತ್ರ ಸಲ್ಲಿಸಿದ ಬಳಿಕವೇ ಸುದೀಪ್‌ ಪ್ರಚಾರಕ್ಕೆ ಬರಲಿದ್ದಾರೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

4 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago