Advertisement
ಸುದ್ದಿಗಳು

ಇಂದು ಸಿಎಂ ಬೊಮ್ಮಾಯಿ ನಾಮಪತ್ರ: ನಡ್ಡಾ, ಸುದೀಪ್‌ ರೋಡ್‌ ಶೋ : ಹರಿದು ಬಂದ ಜನಸಾಗರ

Share

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಸುದೀಪ್‌ ಸೇರಿ 10ಕ್ಕೂ ಹೆಚ್ಚು ಸಚಿವರು ಭಾಗವಹಿಸಿದ್ದರು. ಇದು ಶಿಗ್ಗಾಂವಿ, ಹಾವೇರಿಯಷ್ಟೇ ಅಲ್ಲದೆ ಉತ್ತರ ಕರ್ನಾಟಕ ಭಾಗದ ಕಮಲ ಪಡೆಯಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ನಿರೀಕ್ಷೆಯಿದೆ. ಶಿಗ್ಗಾಂವಿ ಕ್ಷೇತ್ರದಿಂದ ಬೊಮ್ಮಾಯಿ 4ನೇ ಬಾರಿಗೆ ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ. ಏ.15ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದ ಅವರು ಬುಧವಾರ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.

ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಮಾತ್ರ ಬಾಕಿಯಿದ್ದು, ಇಂದು ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ, ಭರ್ಜರಿ ರೋಡ್ ಶೋ ಮೂಲಕವಾಗಿ ಸಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದಕ್ಕೂ ಮುನ್ನ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಬೃಹತ್ ರೋಡ್ ಶೋ, ಸಮಾವೇಶ್ ನಡೆಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಕಿಚ್ಚ ಸುದೀಪ್ ಭಾಗವಹಿಸಿದ್ದರು.

ರೋಡ್ ಶೋ, ಸಮಾವೇಶದ ಬಳಿಕ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಿಂ ಬಸವರಾಜ್ ಬೊಮ್ಮಾಯಿ, ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕಿಚ್ಚ ಸುದೀಪ್ ಸಾಥ್ ನೀಡಿದರು.

ಸಲ್ಲಿಕೆಗೆ ಇನ್ನೆರಡು ದಿನಗಳಷ್ಟೇ ಬಾಕಿಯಿದ್ದು, ಮಂಗಳವಾರ ರಾತ್ರಿ ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಫೈನಲ್‌ ಮಾಡಿದೆ. ಮಹಮ್ಮದ್‌ ಸವಣೂರ್‌ಗೆ ಟಿಕೆಟ್‌ ಘೋಷಿಸಿದೆ. ಇತ್ತ ಮುಖ್ಯಮಂತ್ರಿ ಬೊಮ್ಮಾಯಿ ಕ್ಷೇತ್ರದಲ್ಲಿ ಬಿಜೆಪಿ ಬಿರುಗಾಳಿ ಎಬ್ಬಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೆ ಆಗಮಿಸುತ್ತಿರುವುದು ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಳಿಸಿದೆ. ಅಲ್ಲದೆ ನಟ ಕಿಚ್ಚ ಸುದೀಪ್‌ ಪಾಲ್ಗೊಳ್ಳುತ್ತಿರುವುದು ವಿಶೇಷ.

ಸಿಎಂ ಪರ ಕಿಚ್ಚ ಸುದೀಪ್‌ ಪ್ರಚಾರ: ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್‌ ಈ ಹಿಂದೆಯೇ ಘೋಷಣೆ ಮಾಡಿದ್ದರೂ ಈವರೆಗೆ ಎಲ್ಲೂ ಪ್ರಚಾರಕ್ಕೆ ಆಗಮಿಸಿರಲಿಲ್ಲ. ಮುಖ್ಯಮಂತ್ರಿ ತವರು ಕ್ಷೇತ್ರದಿಂದಲೇ ಸುದೀಪ್‌ ಪ್ರಚಾರ ಆರಂಭಗೊಳ್ಳುತ್ತಿರುವುದು ವಿಶೇಷ. ರೋಡ್‌ ಶೋದಲ್ಲಿ ಹತ್ತಾರು ಸಾವಿರ ಜನ ಪಾಲ್ಗೊಗೊಂಡಿದ್ದು, ಇಡೀ ಶಿಗ್ಗಾಂವಿ ಪಟ್ಟಣ ಕೇಸರಿಮಯವಾಗಿತ್ತು. ನೆಚ್ಚಿನ ನಟನನ್ನು ನೋಡುವ ಕಾತರದಲ್ಲಿ ಯುವ ಪಡೆಯಿದೆ. ಶಿಗ್ಗಾಂವಿ ಅಖಾಡದಲ್ಲಿ ಕುಸ್ತಿಗೆ ರೆಡಿಯಾಗಿರುವ ಬೊಮ್ಮಾಯಿ ಆರಂಭದಲ್ಲೇ ಶಕ್ತಿ ಪ್ರದರ್ಶನದ ಮೂಲಕ ವಿಪಕ್ಷಗಳಿಗೆ ಎಚ್ಚರಿಕೆ ಸಂದೇಶ ನೀಡಲು ಹೊರಟಿದ್ದಾರೆ.

ಸ್ವತಃ ಸಿಎಂ ಕೂಡ ತಾವು ನಾಮಪತ್ರ ಸಲ್ಲಿಸಿದ ಬಳಿಕವೇ ಸುದೀಪ್‌ ಪ್ರಚಾರಕ್ಕೆ ಬರಲಿದ್ದಾರೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

12 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago