ಗ್ರಾಮೀಣ ಭಾಗದ ಶಕ್ತಿ | ಕೃಷಿ ಕುಟುಂಬದ ದಂಪತಿಗಳು ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿ |

April 8, 2024
11:56 PM

ಪತಿಪತ್ನಿ ಇಬ್ಬರೂ ಏಕಕಾಲಕ್ಕೆ ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ್ದಾರೆ. ಕಡಬ ತಾಲೂಕಿನ  ಮರ್ಧಾಳದ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅವರ ಪತ್ನಿ ವಾಣಿ ಶೆಟ್ಟಿ ಅವರು  ಪದೋನ್ನತಿ ಹೊಂದಿದ ದಂಪತಿಗಳು.

ಇವರು ಮೂಲತಃ ಕಡಬ ತಾಲೂಕಿನ ಮರ್ದಾಳದವರಾದ ವಿಜಯಕುಮಾರ್‌ ಅವರು ಕೃಷಿ ಕುಂಟುಂಬದ ಹಿನ್ನೆಲೆಯವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮರ್ಧಾಳದಲ್ಲಿ ಪೂರೈಸಿ ಹೈಸ್ಕೂಲ್ ಹಾಗೂ ದ್ವಿತೀಯ ಪಿಯುಸಿ ಯನ್ನು ನಮ್ಮ ಕುಕ್ಕೆ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪೂರೈಸಿರುತ್ತಾರೆ. ಪದವಿಯನ್ನು ಬಿಕಾಂ ಪದವಿಯೊಂದಿಗೆ 1991 ರಿಂದ 94 ರಲ್ಲಿ ನಮ್ಮಮಹಾವಿದ್ಯಾಲಯದಲ್ಲಿ ಪೂರೈಸಿರುತ್ತಾರೆ. ನಂತರ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ 1998 ರಲ್ಲಿ ಕಾನೂನು ಪದವಿಯನ್ನು ಪಡೆದಿರುತ್ತಾರೆ. ನಂತರ 1999 ರಿಂದ ಇವರು ಮಂಗಳೂರಿನ ಖ್ಯಾತ ವಕೀಲರಾದ ಪಿಪಿ ಹೆಗಡೆ ಅವರೊಂದಿಗೆ ಲಾ ಪ್ರಾಕ್ಟೀಸ್ ಮಾಡುತ್ತಿದ್ದರು.

ಮಂಗಳೂರಿನಲ್ಲಿ ತಮ್ಮ ವಕೀಲ ವೃತ್ತಿಯನ್ನು ಆರ ಆರಂಭಿಸಿ ಸಾಕಷ್ಟು ಅನುಭವ ಪಡೆದ ನಂತರ 2008ರಲ್ಲಿ ಜಡ್ಜ್ ಆಗಿ ನೇಮಕಗೊಂಡು ಶಿವಮೊಗ್ಗ ಬೆಂಗಳೂರು ಹಾಸನ ಬೆಳಗಾಂ ಮಂಡ್ಯ ಜಿಲ್ಲೆಯಲ್ಲಿ ಜುಡಿಶಿಯಲ್ ಮ್ಯಾಗ್ಜಿಸ್ಟ್ರೇಟ್ ಹಾಗೂ ಸಿವಿಲ್ ಜಡ್ಜ್ ಸೀನಿಯರ್ ಡಿವಿಷನ್ ಆಗಿ ಕೆಲಸ ನಿರ್ವಹಿಸಿರುತ್ತಾರೆ. ಅದಲ್ಲದೆ ಇವರು ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಡ್ಮಿನಿಸ್ಟ್ರೇಟರ್ ಆಗಿ ಕೆಲಸ ನಿರ್ವಹಿಸಿರುತ್ತಾರೆ , ಅದಲ್ಲದೆ ಕರ್ನಾಟಕದ ಲೋಕಾಯುಕ್ತ ಇಲಾಖೆಯ ಸೆಕ್ರೆಟರಿ ಯಾಗಿಯೂ ನಾಲ್ಕು ವರ್ಷಗಳ ಕಾಲ ಕೆಲಸ ನಿರ್ವಹಿಸಿರುತ್ತಾರೆ ಸರಳ ಸಜ್ಜನಕಿಯ ವ್ಯಕ್ತಿಯಾಗಿರುವ ವಿಜಯ್ ಕುಮಾರ್ ರೈ ಇವರು ವಕೀಲ ವೃತ್ತಿಯಲ್ಲಿ ಸಾಕಷ್ಟು ಅನುಭವ ಪಡೆದು ವಕೀಲರಿಗೆ ಮಾರ್ಗದರ್ಶಕರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror