ಪತಿಪತ್ನಿ ಇಬ್ಬರೂ ಏಕಕಾಲಕ್ಕೆ ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ್ದಾರೆ. ಕಡಬ ತಾಲೂಕಿನ ಮರ್ಧಾಳದ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅವರ ಪತ್ನಿ ವಾಣಿ ಶೆಟ್ಟಿ ಅವರು ಪದೋನ್ನತಿ ಹೊಂದಿದ ದಂಪತಿಗಳು.
ಇವರು ಮೂಲತಃ ಕಡಬ ತಾಲೂಕಿನ ಮರ್ದಾಳದವರಾದ ವಿಜಯಕುಮಾರ್ ಅವರು ಕೃಷಿ ಕುಂಟುಂಬದ ಹಿನ್ನೆಲೆಯವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮರ್ಧಾಳದಲ್ಲಿ ಪೂರೈಸಿ ಹೈಸ್ಕೂಲ್ ಹಾಗೂ ದ್ವಿತೀಯ ಪಿಯುಸಿ ಯನ್ನು ನಮ್ಮ ಕುಕ್ಕೆ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪೂರೈಸಿರುತ್ತಾರೆ. ಪದವಿಯನ್ನು ಬಿಕಾಂ ಪದವಿಯೊಂದಿಗೆ 1991 ರಿಂದ 94 ರಲ್ಲಿ ನಮ್ಮಮಹಾವಿದ್ಯಾಲಯದಲ್ಲಿ ಪೂರೈಸಿರುತ್ತಾರೆ. ನಂತರ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ 1998 ರಲ್ಲಿ ಕಾನೂನು ಪದವಿಯನ್ನು ಪಡೆದಿರುತ್ತಾರೆ. ನಂತರ 1999 ರಿಂದ ಇವರು ಮಂಗಳೂರಿನ ಖ್ಯಾತ ವಕೀಲರಾದ ಪಿಪಿ ಹೆಗಡೆ ಅವರೊಂದಿಗೆ ಲಾ ಪ್ರಾಕ್ಟೀಸ್ ಮಾಡುತ್ತಿದ್ದರು.
ಮಂಗಳೂರಿನಲ್ಲಿ ತಮ್ಮ ವಕೀಲ ವೃತ್ತಿಯನ್ನು ಆರ ಆರಂಭಿಸಿ ಸಾಕಷ್ಟು ಅನುಭವ ಪಡೆದ ನಂತರ 2008ರಲ್ಲಿ ಜಡ್ಜ್ ಆಗಿ ನೇಮಕಗೊಂಡು ಶಿವಮೊಗ್ಗ ಬೆಂಗಳೂರು ಹಾಸನ ಬೆಳಗಾಂ ಮಂಡ್ಯ ಜಿಲ್ಲೆಯಲ್ಲಿ ಜುಡಿಶಿಯಲ್ ಮ್ಯಾಗ್ಜಿಸ್ಟ್ರೇಟ್ ಹಾಗೂ ಸಿವಿಲ್ ಜಡ್ಜ್ ಸೀನಿಯರ್ ಡಿವಿಷನ್ ಆಗಿ ಕೆಲಸ ನಿರ್ವಹಿಸಿರುತ್ತಾರೆ. ಅದಲ್ಲದೆ ಇವರು ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಡ್ಮಿನಿಸ್ಟ್ರೇಟರ್ ಆಗಿ ಕೆಲಸ ನಿರ್ವಹಿಸಿರುತ್ತಾರೆ , ಅದಲ್ಲದೆ ಕರ್ನಾಟಕದ ಲೋಕಾಯುಕ್ತ ಇಲಾಖೆಯ ಸೆಕ್ರೆಟರಿ ಯಾಗಿಯೂ ನಾಲ್ಕು ವರ್ಷಗಳ ಕಾಲ ಕೆಲಸ ನಿರ್ವಹಿಸಿರುತ್ತಾರೆ ಸರಳ ಸಜ್ಜನಕಿಯ ವ್ಯಕ್ತಿಯಾಗಿರುವ ವಿಜಯ್ ಕುಮಾರ್ ರೈ ಇವರು ವಕೀಲ ವೃತ್ತಿಯಲ್ಲಿ ಸಾಕಷ್ಟು ಅನುಭವ ಪಡೆದು ವಕೀಲರಿಗೆ ಮಾರ್ಗದರ್ಶಕರಾಗಿಯೂ ಕೆಲಸ ನಿರ್ವಹಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…