Advertisement
ಸುದ್ದಿಗಳು

ಗ್ರಾಮೀಣ ಭಾಗದ ಶಕ್ತಿ | ಕೃಷಿ ಕುಟುಂಬದ ದಂಪತಿಗಳು ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿ |

Share

ಪತಿಪತ್ನಿ ಇಬ್ಬರೂ ಏಕಕಾಲಕ್ಕೆ ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ್ದಾರೆ. ಕಡಬ ತಾಲೂಕಿನ  ಮರ್ಧಾಳದ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅವರ ಪತ್ನಿ ವಾಣಿ ಶೆಟ್ಟಿ ಅವರು  ಪದೋನ್ನತಿ ಹೊಂದಿದ ದಂಪತಿಗಳು.

ಇವರು ಮೂಲತಃ ಕಡಬ ತಾಲೂಕಿನ ಮರ್ದಾಳದವರಾದ ವಿಜಯಕುಮಾರ್‌ ಅವರು ಕೃಷಿ ಕುಂಟುಂಬದ ಹಿನ್ನೆಲೆಯವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮರ್ಧಾಳದಲ್ಲಿ ಪೂರೈಸಿ ಹೈಸ್ಕೂಲ್ ಹಾಗೂ ದ್ವಿತೀಯ ಪಿಯುಸಿ ಯನ್ನು ನಮ್ಮ ಕುಕ್ಕೆ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪೂರೈಸಿರುತ್ತಾರೆ. ಪದವಿಯನ್ನು ಬಿಕಾಂ ಪದವಿಯೊಂದಿಗೆ 1991 ರಿಂದ 94 ರಲ್ಲಿ ನಮ್ಮಮಹಾವಿದ್ಯಾಲಯದಲ್ಲಿ ಪೂರೈಸಿರುತ್ತಾರೆ. ನಂತರ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ 1998 ರಲ್ಲಿ ಕಾನೂನು ಪದವಿಯನ್ನು ಪಡೆದಿರುತ್ತಾರೆ. ನಂತರ 1999 ರಿಂದ ಇವರು ಮಂಗಳೂರಿನ ಖ್ಯಾತ ವಕೀಲರಾದ ಪಿಪಿ ಹೆಗಡೆ ಅವರೊಂದಿಗೆ ಲಾ ಪ್ರಾಕ್ಟೀಸ್ ಮಾಡುತ್ತಿದ್ದರು.

ಮಂಗಳೂರಿನಲ್ಲಿ ತಮ್ಮ ವಕೀಲ ವೃತ್ತಿಯನ್ನು ಆರ ಆರಂಭಿಸಿ ಸಾಕಷ್ಟು ಅನುಭವ ಪಡೆದ ನಂತರ 2008ರಲ್ಲಿ ಜಡ್ಜ್ ಆಗಿ ನೇಮಕಗೊಂಡು ಶಿವಮೊಗ್ಗ ಬೆಂಗಳೂರು ಹಾಸನ ಬೆಳಗಾಂ ಮಂಡ್ಯ ಜಿಲ್ಲೆಯಲ್ಲಿ ಜುಡಿಶಿಯಲ್ ಮ್ಯಾಗ್ಜಿಸ್ಟ್ರೇಟ್ ಹಾಗೂ ಸಿವಿಲ್ ಜಡ್ಜ್ ಸೀನಿಯರ್ ಡಿವಿಷನ್ ಆಗಿ ಕೆಲಸ ನಿರ್ವಹಿಸಿರುತ್ತಾರೆ. ಅದಲ್ಲದೆ ಇವರು ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಡ್ಮಿನಿಸ್ಟ್ರೇಟರ್ ಆಗಿ ಕೆಲಸ ನಿರ್ವಹಿಸಿರುತ್ತಾರೆ , ಅದಲ್ಲದೆ ಕರ್ನಾಟಕದ ಲೋಕಾಯುಕ್ತ ಇಲಾಖೆಯ ಸೆಕ್ರೆಟರಿ ಯಾಗಿಯೂ ನಾಲ್ಕು ವರ್ಷಗಳ ಕಾಲ ಕೆಲಸ ನಿರ್ವಹಿಸಿರುತ್ತಾರೆ ಸರಳ ಸಜ್ಜನಕಿಯ ವ್ಯಕ್ತಿಯಾಗಿರುವ ವಿಜಯ್ ಕುಮಾರ್ ರೈ ಇವರು ವಕೀಲ ವೃತ್ತಿಯಲ್ಲಿ ಸಾಕಷ್ಟು ಅನುಭವ ಪಡೆದು ವಕೀಲರಿಗೆ ಮಾರ್ಗದರ್ಶಕರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

7 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

7 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

8 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

12 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago