Advertisement
ಸುದ್ದಿಗಳು

ಗ್ರಾಮೀಣ ಭಾಗದ ಶಕ್ತಿ | ಕೃಷಿ ಕುಟುಂಬದ ದಂಪತಿಗಳು ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿ |

Share

ಪತಿಪತ್ನಿ ಇಬ್ಬರೂ ಏಕಕಾಲಕ್ಕೆ ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ್ದಾರೆ. ಕಡಬ ತಾಲೂಕಿನ  ಮರ್ಧಾಳದ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅವರ ಪತ್ನಿ ವಾಣಿ ಶೆಟ್ಟಿ ಅವರು  ಪದೋನ್ನತಿ ಹೊಂದಿದ ದಂಪತಿಗಳು.

ಇವರು ಮೂಲತಃ ಕಡಬ ತಾಲೂಕಿನ ಮರ್ದಾಳದವರಾದ ವಿಜಯಕುಮಾರ್‌ ಅವರು ಕೃಷಿ ಕುಂಟುಂಬದ ಹಿನ್ನೆಲೆಯವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮರ್ಧಾಳದಲ್ಲಿ ಪೂರೈಸಿ ಹೈಸ್ಕೂಲ್ ಹಾಗೂ ದ್ವಿತೀಯ ಪಿಯುಸಿ ಯನ್ನು ನಮ್ಮ ಕುಕ್ಕೆ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪೂರೈಸಿರುತ್ತಾರೆ. ಪದವಿಯನ್ನು ಬಿಕಾಂ ಪದವಿಯೊಂದಿಗೆ 1991 ರಿಂದ 94 ರಲ್ಲಿ ನಮ್ಮಮಹಾವಿದ್ಯಾಲಯದಲ್ಲಿ ಪೂರೈಸಿರುತ್ತಾರೆ. ನಂತರ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ 1998 ರಲ್ಲಿ ಕಾನೂನು ಪದವಿಯನ್ನು ಪಡೆದಿರುತ್ತಾರೆ. ನಂತರ 1999 ರಿಂದ ಇವರು ಮಂಗಳೂರಿನ ಖ್ಯಾತ ವಕೀಲರಾದ ಪಿಪಿ ಹೆಗಡೆ ಅವರೊಂದಿಗೆ ಲಾ ಪ್ರಾಕ್ಟೀಸ್ ಮಾಡುತ್ತಿದ್ದರು.

ಮಂಗಳೂರಿನಲ್ಲಿ ತಮ್ಮ ವಕೀಲ ವೃತ್ತಿಯನ್ನು ಆರ ಆರಂಭಿಸಿ ಸಾಕಷ್ಟು ಅನುಭವ ಪಡೆದ ನಂತರ 2008ರಲ್ಲಿ ಜಡ್ಜ್ ಆಗಿ ನೇಮಕಗೊಂಡು ಶಿವಮೊಗ್ಗ ಬೆಂಗಳೂರು ಹಾಸನ ಬೆಳಗಾಂ ಮಂಡ್ಯ ಜಿಲ್ಲೆಯಲ್ಲಿ ಜುಡಿಶಿಯಲ್ ಮ್ಯಾಗ್ಜಿಸ್ಟ್ರೇಟ್ ಹಾಗೂ ಸಿವಿಲ್ ಜಡ್ಜ್ ಸೀನಿಯರ್ ಡಿವಿಷನ್ ಆಗಿ ಕೆಲಸ ನಿರ್ವಹಿಸಿರುತ್ತಾರೆ. ಅದಲ್ಲದೆ ಇವರು ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಡ್ಮಿನಿಸ್ಟ್ರೇಟರ್ ಆಗಿ ಕೆಲಸ ನಿರ್ವಹಿಸಿರುತ್ತಾರೆ , ಅದಲ್ಲದೆ ಕರ್ನಾಟಕದ ಲೋಕಾಯುಕ್ತ ಇಲಾಖೆಯ ಸೆಕ್ರೆಟರಿ ಯಾಗಿಯೂ ನಾಲ್ಕು ವರ್ಷಗಳ ಕಾಲ ಕೆಲಸ ನಿರ್ವಹಿಸಿರುತ್ತಾರೆ ಸರಳ ಸಜ್ಜನಕಿಯ ವ್ಯಕ್ತಿಯಾಗಿರುವ ವಿಜಯ್ ಕುಮಾರ್ ರೈ ಇವರು ವಕೀಲ ವೃತ್ತಿಯಲ್ಲಿ ಸಾಕಷ್ಟು ಅನುಭವ ಪಡೆದು ವಕೀಲರಿಗೆ ಮಾರ್ಗದರ್ಶಕರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

4 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

13 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

13 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

13 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

23 hours ago